“ಆಚಾರಕ್ಕೆ ಅರಸನಾಗು, ನೀತಿಗೆ ಪ್ರಭುವಾಗು, ಮಾತಿನಲ್ಲಿ ಚೂಡಾಮಣಿಯಾಗು, ಜ್ಯೋತಿಯಾಗು ಜಗಕೆಲ್ಲ ಎಂಬ ಮಾತು ನಮಗೆಲ್ಲ ದಾರಿದೀಪವಾಗಬೇಕು. ಪುಟಾಣಿಗಳು ದೀಪಗಳಂತೆ, ಅದು ಶಾಲೆಯಲ್ಲಿ ಬೆಳಗುತ್ತದೆ. ಜೀವನ ಮೌಲ್ಯಗಳನ್ನು ಅಭಿವ್ಯಕ್ತಿಗೊಳಿಸುವಲ್ಲಿ ಇಂತಹ ಕಾರ್ಯಕ್ರಮಗಳು ಅಗತ್ಯವಾಗಿವೆ.” ಎಂದು ಇಚ್ಲಂಪಾಡಿ ಹಿರಿಯ ಬುನಾದಿ ಶಾಲಾ ಮುಖ್ಯೋಪಾಧ್ಯಾಯ ಪಿ. ನರಹರಿ ಅಭಿಪ್ರಾಯಪಟ್ಟರು. ಅವರು ದಿನಾಂಕ ೩೦.೦೭.೨೦೧೦ ಶುಕ್ರವಾರ ತಿಂಗಳ ‘ಪ್ರತಿಭಾ ಭಾರತೀ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಆರನೇ ತರಗತಿ ವಿದ್ಯಾರ್ಥಿ ನವನೀತ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಆಡಳಿತ ಮಂಡಳಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್.ಎಂ, ದರ್ಬೆ-ಮಾರ್ಗ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕಿರಣ ಮಹೇಶ ಸ್ವಾಗತಿಸಿ, ಸುಹಾಸ್ ಜಿ.ಕಾಕತ್ಕರ್ ವಂದಿಸಿದರು. ಕೃಷ್ಣಕಿರಣ ಮತ್ತು ದೀಪಿಕಾ ಕಾರ್ಯಕ್ರಮ ನಿರೂಪಿಸಿದರು.
Jul 31, 2010
Jul 25, 2010
ಪ್ರತಿಭಾ ಭಾರತೀ ಉದ್ಘಾಟನೆ...
ವಿದ್ಯಾರ್ಥಿಗಳ ಸಾಂಸ್ಕೃತಿಕ ಚಟುವಟಿಕೆಗಳ ವಿಕಾಸಕ್ಕಾಗಿ ನಮ್ಮಲ್ಲಿ ರೂಪುಗೊಂಡಿರುವ ವೇದಿಕೆ ‘ಪ್ರತಿಭಾ ಭಾರತೀ’. ಪ್ರತಿಭಾ ಭಾರತೀ ವಾರ್ಷಿಕ ಉದ್ಘಾಟನೆಯನ್ನು ಈ ಬಾರಿ ನೆರವೇರಿಸಿದವರು ಹಿರಿಯ ಚಿತ್ರಕಲಾ ಅಧ್ಯಾಪಕ ಶ್ರೀ ರಾಮಕೃಷ್ಣ ಹೆಬ್ಬಾರ್. ಧನ್ಯವಾದಗಳು.
ಕಾರ್ಯಕ್ರಮದ ಬಹುಪಾಲು ಕರ್ತವ್ಯವನ್ನೂ ವಿದ್ಯಾರ್ಥಿಗಳೇ ನಿರ್ವಹಿಸುವುದು ಪ್ರತಿಭಾ ಭಾರತೀ ವಿಶೇಷ.
Jul 22, 2010
ವನಜೀವನ ಯಜ್ಞ
“ಎಳವೆಯಲ್ಲೇ ಪರಿಸರ ಕುರಿತ ಕಾಳಜಿ ಜಾಗೃತಗೊಳ್ಳಲು ವನಮಹೋತ್ಸವ ಕಾರ್ಯಕ್ರಮ ಉತ್ತಮ ತರಬೇತಿ ನೀಡುತ್ತದೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ, ಅರಣ್ಯ ಸಂರಕ್ಷಣೆಯ ಆಶಯಗಳು ಮೂಡುತ್ತವೆ. ಈ ನಿಟ್ಟಿನಲ್ಲಿ ಗೋಕರ್ಣ ಮಂಡಲಾಧೀಶ ಹೊಸನಗರ ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ಸಂಕಲ್ಪ ನಮಗೆಲ್ಲ ಉತ್ತಮ ಹಾದಿಯನ್ನು ತೋರಿಸಿದೆ." ಎಂದು ಪುತ್ತಿಗೆ ಗ್ರಾಮ ಪಂಚಾಯತು ಉಪಾಧ್ಯಕ್ಷ ಜಯಂತ ಪಾಟಾಳಿ ಅಭಿಪ್ರಾಯಪಟ್ಟರು. ಅವರು ನಮ್ಮ ಶಾಲೆಯಲ್ಲಿ ೨೧.೦೭.೨೦೧೦ ಬುಧವಾರದಂದು ವನಜೀವನ ಯಜ್ಞ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಶಾಲಾ ಆಡಳಿತ ಮಂಡಳಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್ ದರ್ಭೆ-ಮಾರ್ಗ ಮತ್ತು ಶ್ರೀ ಭಾರತೀ ಸಂಸ್ಕೃತ ಮಹಾವಿದ್ಯಾಲಯದ ಪ್ರಾಂಶುಪಾಲ ಕೃಷ್ಣಮೂರ್ತಿ ಪುದುಕೋಳಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅಶ್ವತಿ ಸ್ವಾಗತಿಸಿ ಜೀವಿತ್ ವಂದಿಸಿದರು. ಸುಪ್ರೀತಾ ಕಾರ್ಯಕ್ರಮ ನಿರೂಪಿಸಿದರು.
ಶಾಲಾ ಆಡಳಿತ ಮಂಡಳಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್ ದರ್ಭೆ-ಮಾರ್ಗ ಮತ್ತು ಶ್ರೀ ಭಾರತೀ ಸಂಸ್ಕೃತ ಮಹಾವಿದ್ಯಾಲಯದ ಪ್ರಾಂಶುಪಾಲ ಕೃಷ್ಣಮೂರ್ತಿ ಪುದುಕೋಳಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅಶ್ವತಿ ಸ್ವಾಗತಿಸಿ ಜೀವಿತ್ ವಂದಿಸಿದರು. ಸುಪ್ರೀತಾ ಕಾರ್ಯಕ್ರಮ ನಿರೂಪಿಸಿದರು.
Jul 21, 2010
ಎಯ್ಯೂರಿನ ಭತ್ತದ ಗದ್ದೆಗೆ ಭೇಟಿ
ಕ್ಷೇತ್ರ ಭೇಟಿಯ ಉದ್ದೇಶದಲ್ಲಿ ಮೊನ್ನೆ ಸೋಮವಾರ ಎಡನಾಡು ಗ್ರಾಮದ ಕೃಷಿಕ ಎಯ್ಯೂರು ಚಂದ್ರಶೇಖರ ಭಟ್ಟರ ಭತ್ತದ ಗದ್ದೆಗೆ ಭೇಟಿ ನೀಡಿ ಬಂದೆವು. ವಿದ್ಯಾರ್ಥಿಗಳು ಭತ್ತದ ಗದ್ದೆಗೆ ಇಳಿದು ನಾಟಿ ಕಾರ್ಯದ ಪ್ರಾತ್ಯಕ್ಷಿಕೆ ವೀಕ್ಷಿಸಿದರು. ಸ್ವಯಂ ಭತ್ತದ ಗಿಡಗಳನ್ನು ನೆಟ್ಟು ಹೊಸ ಅನುಭೂತಿಯನ್ನು ಪಡೆದುಕೊಂಡರು.
Subscribe to:
Posts (Atom)