“ಎಳವೆಯಲ್ಲೇ ಪರಿಸರ ಕುರಿತ ಕಾಳಜಿ ಜಾಗೃತಗೊಳ್ಳಲು ವನಮಹೋತ್ಸವ ಕಾರ್ಯಕ್ರಮ ಉತ್ತಮ ತರಬೇತಿ ನೀಡುತ್ತದೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ, ಅರಣ್ಯ ಸಂರಕ್ಷಣೆಯ ಆಶಯಗಳು ಮೂಡುತ್ತವೆ. ಈ ನಿಟ್ಟಿನಲ್ಲಿ ಗೋಕರ್ಣ ಮಂಡಲಾಧೀಶ ಹೊಸನಗರ ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ಸಂಕಲ್ಪ ನಮಗೆಲ್ಲ ಉತ್ತಮ ಹಾದಿಯನ್ನು ತೋರಿಸಿದೆ." ಎಂದು ಪುತ್ತಿಗೆ ಗ್ರಾಮ ಪಂಚಾಯತು ಉಪಾಧ್ಯಕ್ಷ ಜಯಂತ ಪಾಟಾಳಿ ಅಭಿಪ್ರಾಯಪಟ್ಟರು. ಅವರು ನಮ್ಮ ಶಾಲೆಯಲ್ಲಿ ೨೧.೦೭.೨೦೧೦ ಬುಧವಾರದಂದು ವನಜೀವನ ಯಜ್ಞ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಶಾಲಾ ಆಡಳಿತ ಮಂಡಳಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್ ದರ್ಭೆ-ಮಾರ್ಗ ಮತ್ತು ಶ್ರೀ ಭಾರತೀ ಸಂಸ್ಕೃತ ಮಹಾವಿದ್ಯಾಲಯದ ಪ್ರಾಂಶುಪಾಲ ಕೃಷ್ಣಮೂರ್ತಿ ಪುದುಕೋಳಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅಶ್ವತಿ ಸ್ವಾಗತಿಸಿ ಜೀವಿತ್ ವಂದಿಸಿದರು. ಸುಪ್ರೀತಾ ಕಾರ್ಯಕ್ರಮ ನಿರೂಪಿಸಿದರು.
Jul 22, 2010
Subscribe to:
Post Comments (Atom)
neevu protocol ullanghisiddeeri
ReplyDeleteHARE RAMA.JAI GURUDEVA. OLLEYA BELAVANIGE.SITE OLLEDAGI HOMMIDDU. SHUBHASHAYAGALU
ReplyDeleteprakrutiya sobagu bahala chennagide.....
ReplyDelete