Aug 13, 2010

ವೈದ್ಯರೊಂದಿಗೆ ಮಾತುಕತೆ

"ಜೀವನದಲ್ಲಿ ಶಿಸ್ತು ರೂಪಿಸಿಕೊಳ್ಳುವುದರ ಜೊತೆಗೆ ಶುಚಿತ್ವದ ಕಡೆಗಿನ ಗಮನವನ್ನೂ ಬೆಳೆಸಿಕೊಳ್ಳಬೇಕು. ಹಿರಿಯರ ಬಗ್ಗೆ ಗೌರವವನ್ನು ಬೆಳೆಸಿಕೊಂಡು ವಿದ್ಯಾರ್ಥಿ ದೆಸೆಯಲ್ಲಿಯೇ ಶುಚಿತ್ವ, ಆರೋಗ್ಯ ಮತ್ತು ಅಧ್ಯಯನಗಳ ಬಗ್ಗೆ ಶ್ರದ್ಧೆ ವಹಿಸಿದರೆ ಯಶಸ್ಸು ಸಾಧ್ಯ" ಎಂದು ಖ್ಯಾತ ವೈದ್ಯೆ ಡಾ| ಮಾಲತೀ ಪ್ರಕಾಶ್ ಅಭಿಪ್ರಾಯಪಟ್ಟರು. ಅವರು ನಿನ್ನೆ ನಮ್ಮಲ್ಲಿ ನಡೆದ ವೈದ್ಯರೊಂದಿಗೆ ಮಾತುಕತೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಶಾಲಾ ಆಡಳಿತ ಮಂಡಳಿಯ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್ ದರ್ಬೆ- ಮಾರ್ಗ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸುಪ್ರೀತಾ.ಎಂ ಸ್ವಾಗತಿಸಿ ಶಿಕ್ಷಕಿ ಸರಿತಾ ವಂದಿಸಿದರು. ರಮ್ಯಾ.ಎಂ. ಕಾರ್ಯಕ್ರಮ ನಿರೂಪಿಸಿದರು.

1 comment: