Sep 30, 2010

ರಂಗೋಲಿ

ಇದು ಏಳನೇ ತರಗತಿಯ ಕಾರ್ತಿಕ್ ಬಿಡಿಸಿದ ರಂಗೋಲಿ. ಇಂದು ನಾಡೆಲ್ಲ ಒತ್ತಡದಲ್ಲಿ ಮುಳುಗಿದೆ. ಮಕ್ಕಳು ಬಿಡಿಸಿದ ಈ ಚಿತ್ರ ನಮ್ಮ ಮನಸ್ಸಿಗೆ ತಂಪೆರೆಯಲಿ...

Sep 24, 2010

ಐಟಿ ಕ್ಲಬ್ ಉದ್ಘಾಟನೆ


“ಜಗತ್ತು ಕಂಪ್ಯೂಟರ್ ಬೆಳವಣಿಗೆಯ ಮೂಲಕ ಹೊಸ ಮನ್ವಂತರದ ಕಡೆಗೆ ದಾಪುಗಾಲು ಹಾಕುತ್ತಿದೆ. ಇಂತಹ ಸಂದರ್ಭದಲ್ಲಿ ಆಧುನಿಕ ಜಗತ್ತಿನ ಜೊತೆಯಲ್ಲಿ ಬೆಳೆಯುವ ದೃಷ್ಟಿಯಿಂದ ಐಟಿ ಕ್ಲಬ್ ಆರಂಭಿಸಲಾಗಿದೆ. ಜಾಗತಿಕ ಬೆಳವಣಿಗೆಗಳ ಕಡೆಗೆ ಗಮನ ನೀಡುತ್ತಾ ಮಾಹಿತಿ ಪೂರ್ಣ ಅಧ್ಯಯನ ನಡೆಸಲು ಐಟಿ ಕ್ಲಬ್ ವಿದ್ಯಾರ್ಥಿಗಳಿಗೆ ನೆರವಾಗಲಿದೆ." ಎಂದು ಶಾಲಾ ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್, ದರ್ಭೆ ಮಾರ್ಗ ಅಭಿಪ್ರಾಯಪಟ್ಟರು. ಅವರು ೨೩.೦೯.೨೦೧೦ ಗುರುವಾರ ನಮ್ಮ ಶಾಲಾ ವಿದ್ಯಾರ್ಥಿಗಳ ಐಟಿ ಕ್ಲಬ್ ಉದ್ಘಾಟಿಸಿ ಮಾತನಾಡುತ್ತಿದ್ದರು.

 ಶಾಲಾ ಆಡಳಿತ ಮಂಡಳಿಯ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ ಅಧ್ಯಕ್ಷತೆ ವಹಿಸಿದ್ದರು. ಶ್ರೀಭಾರತೀ ಸಂಸ್ಕೃತ ಮಹಾವಿದ್ಯಾಲಯದ ಪ್ರಾಂಶುಪಾಲ ಕೃಷ್ಣಮೂರ್ತಿ ಪುದುಕೋಳಿ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿನಿ ಇಂದಿರಾ.ಎಂ. ಪ್ರಾಸ್ತಾವಿಕ ಭಾಷಣ ಮಾಡಿದರು. ವಿದ್ಯಾರ್ಥಿಗಳಾದ ಸುಹಾಸ್ ಜಿ.ಕಾಕತ್ಕರ್ ಸ್ವಾಗತಿಸಿ ನಿಕ್ಷಿತ್ ವಂದಿಸಿದರು. ಅರ್ಪಿತಾ ಕಾರ್ಯಕ್ರಮ ನಿರೂಪಿಸಿದರು.

Sep 1, 2010

ಶ್ರೀಕೃಷ್ಣ ಜಯಂತಿ

“ಅಧರ್ಮದ ಮೇರೆ ಮೀರಿದಾಗ ಅವತಾರವೆತ್ತಿದ ಕೃಷ್ಣ ಪರಮಾತ್ಮನು ಧರ್ಮದ ಪುನಸ್ಥಾಪನೆ ಮಾಡಿದನು. ಸತ್ಯ, ಧರ್ಮದಿಂದ ಬಾಳಿ ಬದುಕುವ ಜನರ ಏಳಿಗೆಗಾಗಿ ಶ್ರಮಿಸಿದನು. ದೇವತಾರಾಧನೆ ಮತ್ತು ಧಾರ್ಮಿಕ ಆಚರಣೆಗಳು ನಮ್ಮ ಸಂಸ್ಕೃತಿಯನ್ನು ಬಿಂಬಿಸುತ್ತವೆ. ವಿದ್ಯಾಲಯಗಳಲ್ಲಿ ಅಂತಹ ಧಾರ್ಮಿಕ ಮೌಲ್ಯದ ದಿನಗಳನ್ನು ಆಚರಿಸುವುದು ಸ್ತುತ್ಯರ್ಹವಾಗಿದೆ" ಎಂದು ನಿವೃತ್ತ ಪ್ರಾಂಶುಪಾಲೆ ಚಂದ್ರಪ್ರಭಾ ಬಿ.ರಾವ್ ಹೇಳಿದರು. ಅವರು ೦೧.೦೯.೨೦೧೦ ಬುಧವಾರ ಮುಜುಂಗಾವು ಶ್ರೀಭಾರತೀ ವಿದ್ಯಾಸಂಸ್ಥೆಗಳಲ್ಲಿ ಜರಗಿದ ‘ಶ್ರೀಕೃಷ್ಣ ಜಯಂತಿ’ ಉತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.


ಶ್ರೀಭಾರತೀ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ ಅಧ್ಯಕ್ಷತೆ ವಹಿಸಿದ್ದರು. ಶ್ರೀಭಾರತೀ ಸಂಸ್ಕೃತ ಮಹಾವಿದ್ಯಾಲಯದ ಪ್ರಾಂಶುಪಾಲ ಕೃಷ್ಣಮೂರ್ತಿ ಪುದುಕೋಳಿ ಹಾಗೂ ಶ್ರೀ ಭಾರತೀ ವಿದ್ಯಾಪೀಠ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆ ಮಾರ್ಗ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಶ್ರೀಹರಿಶಂಕರ ಶರ್ಮ ಸ್ವಾಗತಿಸಿ ವೈಶಾಲಿ ವಂದಿಸಿದರು. ಸುಪ್ರೀತಾ ಕಾರ್ಯಕ್ರಮ ನಿರೂಪಿಸಿದರು. ಜನ್ಮಾಷ್ಟಮಿಯ ಅಂಗವಾಗಿ ಜರಗಿದ ಮುದ್ದುಕೃಷ್ಣ ವೇಷ ಮತ್ತು ಇತರ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.