Feb 28, 2011

ರಕ್ಷಕ ಶಿಕ್ಷಕ ಸಂಘದ ಸಭೆ

ನಮ್ಮ ವಿದ್ಯಾಪೀಠದಲ್ಲಿ ಇಂದು ರಕ್ಷಕ ಶಿಕ್ಷಕ ಸಂಘದ ಸಭೆ. ವಿದ್ಯಾಪೀಠದ ಪ್ರಗತಿಗೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತಿರುವ ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ವಿದ್ಯಾರ್ಥಿಗಳಿಂದ ವಿಸ್ಮಯ ಪ್ರವಾಸದ ಅನುಭವ ಕಥನ, ವಿಸ್ಮಯ ಪ್ರವಾಸದ ಖರ್ಚು ವೆಚ್ಚ, ವಾರ್ಷಿಕೋತ್ಸವದ ಆಯ ವ್ಯಯ ಮಂಡನೆಗಳು ನಡೆದವು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಮ್ಮಂಕಲ್ಲು ಕೃಷ್ಣ ಭಟ್, ಆಡಳಿತ ಮಂಡಳಿಯ ಶ್ಯಾಮರಾಜ್ ದೊಡ್ಡಮಾಣಿ, ಮುಖ್ಯೋಪಾಧ್ಯಾಯ ಶ್ಯಾಮ ಭಟ್, ದರ್ಬೆ-ಮಾರ್ಗ ಮತ್ತಿತರರು ಉಪಸ್ಥಿತರಿದರು. ಮಾತಾಶ್ರೀ ಶಾಂಭವಿ ಸ್ವಾಗತಿಸಿ, ಮಾತಾಶ್ರೀ ಲಾವಣ್ಯ ಧನ್ಯವಾದ ಸಮರ್ಪಿಸಿದರು.

Feb 24, 2011

ಗಜೇಂದ್ರ ಮೋಕ್ಷ - ಶ್ರೀನಿವಾಸ ಕಲ್ಯಾಣ

ಶ್ರೀ ಭಾರತೀ ಸಮೂಹ ವಿದ್ಯಾಸಂಸ್ಥೆಗಳ ಸಹಾಯಾರ್ಥ ಶ್ರೀರಾಮಚಂದ್ರಾಪುರ ಕೃಪಾಪೋಷಿತ ಯಕ್ಷಗಾನ ಮಂಡಳಿಯು ದಿನಾಂಕ 01.03.2011 ಮಂಗಳವಾರ ಸಂಜೆ ಗಂಟೆ 6.30 ರಿಂದ 10.30 ರ ತನಕ ವಿದ್ಯಾಲಯದ ವಠಾರದಲ್ಲಿ ಗಜೇಂದ್ರ ಮೋಕ್ಷ - ಶ್ರೀನಿವಾಸ ಕಲ್ಯಾಣ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಪದ್ಯಾಣ ಗಣಪತಿ ಭಟ್ ಮತ್ತು ಪ್ರಫುಲ್ಲಚಂದ್ರ ನೆಲ್ಯಾಡಿ ಭಾಗವತರಾಗಿಯೂ ಹೆಸರಾಂತ ಕಲಾವಿದರು ವೇಷಧಾರಿಗಳಾಗಿಯೂ ಭಾಗವಹಿಸಲಿದ್ದಾರೆ. ಎಲ್ಲ ಕಲಾಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಯಲಾಟವನ್ನು ಯಶಸ್ವಿಗೊಳಿಸಬೇಕಾಗಿ ಅಪೇಕ್ಷೆ.

Feb 13, 2011

ವಿಸ್ಮಯದಲ್ಲಿ ನಾವು...


ಕಣ್ಣೂರು ಜಿಲ್ಲೆಯ ಹೆಸರಾಂತ ಪರಶ್ಶಿನಿಕ್ಕಡವು ಉರಗೋದ್ಯಾನ, ಮುತ್ತಪ್ಪನ್ ಕ್ಷೇತ್ರ ಮತ್ತು ವಿಸ್ಮಯ ವಾಟರ್ ಪಾರ್ಕ್ ಸಂದರ್ಶಿಸಿ ಬಂದೆವು ನಿನ್ನೆ. ವಿದ್ಯಾರ್ಥಿಗಳಿಗೆ ಈ ಪ್ರಯಾಣ ಅವಿಸ್ಮರಣೀಯ ಅನುಭವ ನೀಡಿದೆ. ಕೆಲ ಕ್ಷಣಗಳ ಚಿತ್ರ ನಿಮ್ಮ ಮುಂದೆ ಇರಿಸುತ್ತಿದ್ದೇವೆ. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಮ್ಮಂಕಲ್ಲು ಕೃಷ್ಣ ಭಟ್, ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್, ದರ್ಭೆ-ಮಾರ್ಗ ಹಾಗೂ ಆಡಳಿತ ಮಂಡಳಿಯ ಶ್ಯಾಮರಾಜ್ ದೊಡ್ಡಮಾಣಿ ನೇತೃತ್ವ ವಹಿಸಿದ್ದರು.

Feb 1, 2011

ಮೊನ್ನೆ, ವರ್ಧಂತ್ಯುತ್ಸವ

“ಶಾಲಾ ಮಟ್ಟದಲ್ಲಿ ನೈತಿಕ ಶಿಕ್ಷಣವನ್ನು ನೀಡುವುದು ಇಂದಿನ ಜನಾಂಗಕ್ಕೆ ಅತೀ ಅಗತ್ಯವಾಗಿದೆ. ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಬೆಳಗಿಸಿ ಅವರ ನೈತಿಕ, ಸಾಂಸ್ಕೃತಿಕ ಮೌಲ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶಾಲಾ ವಾರ್ಷಿಕೋತ್ಸವಗಳು ಗಣನೀಯ ಸೇವೆ ಸಲ್ಲಿಸುತ್ತವೆ. ಇಂತಹ ವರ್ಧಂತ್ಯುತ್ಸವದ ಸಂಭ್ರಮದಲ್ಲಿರುವ ಈ ವಿದ್ಯಾಸಂಸ್ಥೆಗಳು ಕೆಲವೇ ವರ್ಷಗಳಲ್ಲಿ ಬೆಳೆದು ನಾಡಿನಾದ್ಯಂತ ಗುರುತಿಸಲ್ಪಟ್ಟಿರುವುದು ಹೆಮ್ಮೆಯ ವಿಚಾರ” ಎಂದು ಕ್ಯಾಂಪ್ಕೊ ಸಂಸ್ಥೆಯ ಉಪಾಧ್ಯಕ್ಷ ಕೋಳಾರು ಸತೀಶ್ಚಂದ್ರ ಭಂಡಾರಿ ಅಭಿಪ್ರಾಯಪಟ್ಟರು. ಅವರು ದಿನಾಂಕ ೨೮.೦೧.೨೦೧೧ ಶುಕ್ರವಾರ ನಡೆದ ಮುಜುಂಗಾವು ಶ್ರೀಭಾರತೀ ವಿದ್ಯಾಪೀಠ ಮತ್ತು ಶ್ರೀಭಾರತೀ ಸಂಸ್ಕೃತ ಮಹಾವಿದ್ಯಾಲಯಗಳ ವರ್ಧಂತ್ಯುತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಮುಜುಂಗಾವು ಶ್ರೀಭಾರತೀ ಸಮೂಹ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಡಾ|ಡಿ.ಪಿ.ಭಟ್ ಸಭಾಧ್ಯಕ್ಷತೆ ವಹಿಸಿದ್ದರು. ಕುಂಬಳೆ ಗ್ರಾಮ ಪಂಚಾಯತು ಸದಸ್ಯೆ ಅಶ್ವಿನಿ ನಾಣಿತ್ತಿಲು, ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಕರುಣಾಕರ ಅನಂತಪುರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶ್ರೀಭಾರತೀ ವಿದ್ಯಾಪೀಠದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎ.ಕೃಷ್ಣ ಭಟ್ ಶುಭ ಹಾರೈಸಿದರು. ಆಡಳಿತ ಮಂಡಳಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶ್ರೀಭಾರತೀ ವಿದ್ಯಾಪೀಠದ ವರದಿಯನ್ನು ಮುಖ್ಯೋಪಾಧ್ಯಾಯ ಶ್ಯಾಮ ಭಟ್, ದರ್ಭೆ-ಮಾರ್ಗ ಹಾಗೂ ಶ್ರೀಭಾರತೀ ಸಂಸ್ಕೃತ ಮಹಾವಿದ್ಯಾಲಯದ ವರದಿಯನ್ನು ಪ್ರಾಂಶುಪಾಲ ಕೃಷ್ಣಮೂರ್ತಿ ಪುದುಕೋಳಿ ವಾಚಿಸಿದರು.

ಈ ಸಂದರ್ಭದಲ್ಲಿ ಶ್ರೀಭಾರತೀ ವಿದ್ಯಾಪೀಠದ ವಿದ್ಯಾರ್ಥಿಗಳ ‘ಬೆಳಕು’ ಮತ್ತು ಶ್ರೀಭಾರತೀ ಸಂಸ್ಕೃತ ಮಹಾವಿದ್ಯಾಲಯದ ವಿದ್ಯಾರ್ಥಿಗಳ ‘ಬೆಳಗು’ ಹಸ್ತಪ್ರತಿಗಳನ್ನು ಬಿಡುಗಡೆಗೊಳಿಸಲಾಯಿತು. ಶಾಲಾ ವಿದ್ಯಾರ್ಥಿ ನಾಯಕಿ ಸುಪ್ರೀತಾ. ಎಂ ಸ್ವಾಗತಿಸಿ, ಶ್ರೀಹರಿಶಂಕರ ಶರ್ಮ ವಂದಿಸಿದರು. ಈಶ್ವರಚಂದ್ರ ಜೋಯಿಸ ಕಾರ್ಯಕ್ರಮ ನಿರೂಪಿಸಿದರು.








ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ನೃತ್ಯ ವೈವಿಧ್ಯಗಳ ಜೊತೆಗೆ ಶ್ರೀಭಾರತೀ ವಿದ್ಯಾಪೀಠ ದ ವಿದ್ಯಾರ್ಥಿಗಳಿಂದ ‘ವೀರಮಣಿ’ ಮತ್ತು ಶ್ರೀಭಾರತೀ ಸಂಸ್ಕೃತ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ‘ನರಕಾಸುರ ವಧೆ’ ಯಕ್ಷಗಾನ ಬಯಲಾಟ ಜರಗಿತು.