Jul 5, 2011

ಪ್ರತಿಭಾ ಭಾರತೀ ಉದ್ಘಾಟನೆ

ನಿವೃತ್ತ ಶಿಕ್ಷಕ, ಸಾಹಿತಿ, ಪುಟಾಣಿಗಳ ಪ್ರೀತಿಯ ಬಳ್ಳಮೂಲೆ ‘ಗೋವಿಂದಣ್ಣ" ನಮ್ಮ ಶಾಲೆಯ ಪ್ರತಿಭಾ ಭಾರತೀ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯನ್ನು ಮೊನ್ನೆ ಜುಲೈ ಮೊದಲ ತಾರೀಕಿನಂದು ನೆರವೇರಿಸಿದರು. ವಿದ್ಯಾರ್ಥಿಗಳ ಚಟುವಟಿಕೆಯನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ಶಾಲಾ ಆಡಳಿತ ಮಂಡಳಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್, ದರ್ಬೆ-ಮಾರ್ಗ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಸುಪ್ರೀತಾ.ಎಂ ಅಧ್ಯಕ್ಷತೆ ವಹಿಸಿದ್ದರು. ಅಶ್ವತಿ ಸ್ವಾಗತಿಸಿ ಗೌರೀಶ ವಿಶ್ವಾಮಿತ್ರ ವಂದಿಸಿದರು. ಶ್ವೇತಾ.ಕೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಮನರಂಜನಾ ಕಾರ್ಯಕ್ರಮಗಳು ಜರಗಿದವು.

No comments:

Post a Comment