Jul 29, 2011

ಪ್ರತಿಭಾ ಭಾರತೀ

“ಬೆಳೆಯುವ ಹಂತದಲ್ಲಿ ಗುರಿಯ ಕಡೆಗೆ ಅಚಲವಾಗಿ ಸಾಗುವುದು ಮುಖ್ಯ. ಆ ನಿಟ್ಟಿನಲ್ಲಿ ಸಾಗಲು ವಿದ್ಯಾರ್ಥಿಗಳಿಗೆ ಹಲವಾರು ವೇದಿಕೆಗಳಿವೆ. ಹೊಸ ಕಲಿಕಾ ಪದ್ಧತಿಯಲ್ಲಿ ವಿದ್ಯಾರ್ಥಿಗಳಿಗೆ ದೊರೆಯುತ್ತಿರುವ ಅವಕಾಶ ಇನ್ನಷ್ಟು ವಿಶಾಲವಾಗಿ ಬೆಳೆಯುತ್ತಿದೆ. ಅವುಗಳನ್ನು ಅನುಕೂಲಕರವಾಗಿ ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು” ಎಂದು ಕಣಿಪುರ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಎಂ.ನಾ.ಚಂಬಲ್ತಿಮಾರ್ ಅಭಿಪ್ರಾಯಪಟ್ಟರು. ಅವರು ೨೮.೦೭.೨೦೧೧ ಗುರುವಾರ ನಮ್ಮ ವಿದ್ಯಾಪೀಠದಲ್ಲಿ ಜರಗಿದ ತಿಂಗಳ ‘ಪ್ರತಿಭಾ ಭಾರತೀ’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ವಿದ್ಯಾರ್ಥಿನಿ ಶಿಲ್ಪಾ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಆಡಳಿತ ಮಂಡಳಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆ-ಮಾರ್ಗ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ವೈಶಾಲಿ ಸ್ವಾಗತಿಸಿ ಕವಿತಾ ವಂದಿಸಿದರು. ಸಂಕೇತ ಮತ್ತು ಪ್ರಜ್ವಲ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಮನರಂಜನಾ ಕಾರ್ಯಕ್ರಮಗಳು ಜರಗಿದವು.

No comments:

Post a Comment