Aug 24, 2011

ಸರ್ವಾಂತರ್ಯಾಮಿ ಜಗದ್ರಕ್ಷಕ ಶ್ರೀಕೃಷ್ಣ



೨೦.೦೮.೨೦೧೧ ಶನಿವಾರ ನಮ್ಮ ಸಂಸ್ಥೆಯಲ್ಲಿ ನಡೆದ ಶ್ರೀಕೃಷ್ಣ ಜಯಂತಿ ಉತ್ಸವ ಮತ್ತು ಮಹಾನಂದಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಸಾಹಿತಿ ವಿ.ಬಿ.ಕುಳಮರ್ವ,ಕುಂಬಳೆ ವಲಯ ಕಾರ್ಯದರ್ಶಿ ಎಚ್.ಸತ್ಯಶಂಕರ ಭಟ್, ಶಾಲಾ ಆಡಳಿತ ಮಂಡಳಿಯ ಶ್ಯಾಮರಾಜ್ ದೊಡ್ಡಮಾಣಿ ಮತ್ತು ಶಾಲಾ ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್ ದರ್ಬೆ ಮಾರ್ಗ ಉಪಸ್ಥಿತರಿದ್ದರು.

Aug 19, 2011

'ರಾಮಾಯಣ ಮಾಸಾಚರಣೆ’ ಸಮಾರೋಪ

ನಮ್ಮ ವಿದ್ಯಾಪೀಠದಲ್ಲಿ ೧೮.೦೮.೨೦೧೧ ಗುರುವಾರ ಜರಗಿದ ‘ರಾಮಾಯಣ ಮಾಸಾಚರಣೆ’ಯ ಸಮಾರೋಪ ಮತ್ತು ‘ಪ್ರತಿಭಾ ಭಾರತೀ’ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಉಂಡೆಮನೆ ಗಣಪತಿ ಭಟ್ಟ ಮುಖ್ಯ ಭಾಷಣ ಮಾಡಿದರು. ಶಾಲಾ ವಿದ್ಯಾರ್ಥಿ ನಿಕ್ಷಿತ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಆಡಳಿತ ಮಂಡಳಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ, ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್ ದರ್ಬೆ ಮಾರ್ಗ ಉಪಸ್ಥಿತರಿದ್ದರು.
ಶಾಲಾ ನಾಯಕ ಸುಹಾಸ್ ಕಾಕತ್ಕರ್ ಸ್ವಾಗತಿಸಿ, ವಿದ್ಯಾರ್ಥಿನಿ ಅಶ್ವತಿ ವಂದಿಸಿದರು. ಕೃಷ್ಣ ಕಿರಣ ವರದಿ ವಾಚಿಸಿದರು. ಅನುಷ ಮತ್ತು ಅರ್ಪಿತ ಕಾರ್ಯಕ್ರಮ ನಿರೂಪಿಸಿದರು.

Aug 16, 2011

ಸ್ವಾತಂತ್ರ್ಯ ದಿನಾಚರಣೆ

ನಿನ್ನೆ ನಮ್ಮ ಸಂಸ್ಥೆಗಳಲ್ಲಿ ಜರಗಿದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು  ಸ್ವಾತಂತ್ರ್ಯ ಕುರಿತಾದ ಭಾಷಣಗಳನ್ನು ಮಾಡಿದರು. ಕುಂಬಳೆ ಗ್ರಾಮ ಪಂಚಾಯತು ಸದಸ್ಯೆ ಅಶ್ವಿನಿ ನಾಣಿಹಿತ್ತಿಲು, ಕುಂಬಳೆ ಗ್ರಾಮ ಪಂಚಾಯತು ಮಾಜಿ ಉಪಾಧ್ಯಕ್ಷ ಕೇಶವ ಪ್ರಸಾದ್ ನಾಣಿಹಿತ್ತಿಲು, ಆಡಳಿತ ಮಂಡಳಿ ಅಧ್ಯಕ್ಷ ಡಾ| ಡಿ.ಪಿ.ಭಟ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಕೃಷ್ಣ ಭಟ್ ಅಮ್ಮಂಕಲ್ಲು,  ಶಾಲಾ ಆಡಳಿತ ಮಂಡಳಿ ಸದಸ್ಯ ಶಾಮರಾಜ್ ದೊಡ್ಡಮಾಣಿ, ಕೃಷ್ಣಮೂರ್ತಿ ಪುದುಕೋಳಿ, ನಮ್ಮ ಶಾಲಾ ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್ ದರ್ಬೆಮಾರ್ಗ ಉಪಸ್ಥಿತರಿದ್ದರು.
    ವಿದ್ಯಾರ್ಥಿನಿ ಸ್ಮಿತಾ ಜಿ.ಎಲ್ ಸ್ವಾಗತಿಸಿ, ವಿದ್ಯಾರ್ಥಿ ಶ್ರೀಹರಿಶಂಕರ ಶರ್ಮ ಧನ್ಯವಾದ ಸಮರ್ಪಿಸಿದರು. ಮಹೇಶಕೃಷ್ಣ ತೇಜಸ್ವಿ.ಕೆ ಕರ್ಯಕ್ರಮ ನಿರೂಪಿಸಿದರು.

Aug 15, 2011

ರಕ್ಷಾಬಂಧನ

ಸಹೋದರತ್ವ ಮತ್ತು ಭಾವೈಕ್ಯತೆಯ ಸಂಕೇತವಾಗಿ ರಕ್ಷಾಬಂಧನ ಕಾರ್ಯಕ್ರಮವನ್ನು ೧೩.೦೮.೨೦೧೧ ಶನಿವಾರ ನಮ್ಮ ಸಂಸ್ಥೆಯಲ್ಲಿ ಆಚರಿಸಿದೆವು. ಆಡಳಿತ ಮಂಡಳಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ ಮತ್ತು ಶಾಲಾ ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್ ಪರಸ್ಪರ ರಾಖಿಗಳನ್ನು ಕಟ್ಟಿ  ಕಾರ್ಯಕ್ರಮವನ್ನು ಆರಂಭಿಸಿದರು.
ಕಿರಣ್ ಮಹೇಶ್ ಸ್ವಾಗತಿಸಿ ಶ್ರೀವಲ್ಲಿ ಧನ್ಯವಾದ ಸಮರ್ಪಿಸಿದರು. ಶುಭಲಕ್ಷ್ಮಿ ಯಾಜಿ ಕಾರ್ಯಕ್ರಮ ನಿರೂಪಿಸಿದರು.

Aug 5, 2011

ಚಿಂತನ ಭಾರತೀ

ಮೊನ್ನೆ ಜುಲೈ ೨೯ಕ್ಕೆ ನಮ್ಮಲ್ಲಿ ಅಧ್ಯಾಪಕರಿಗಾಗಿ ವಿಶೇಷ ಕಾರ್ಯಕ್ರಮ ’ಚಿಂತನ ಭಾರತೀ’. ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಅನಂತಪುರ ಇವರಿಂದ ಅಧ್ಯಾಪಕರಿಗಾಗಿ ವಿಶೇಷ ತರಬೇತಿ ಏರ್ಪಡಿಸಲಾಗಿತ್ತು. ಬದಿಯಡ್ಕ ಮತ್ತು ನಮ್ಮ ಮುಜುಂಗಾವು ವಿದ್ಯಾಪೀಠಗಳ ಅಧ್ಯಾಪಕರು ತರಬೇತಿಯಲ್ಲಿ ಪಾಲ್ಗೊಂಡರು. ನಿವೃತ್ತ ಶಿಕ್ಷಕ ಕೃಷ್ಣ ಭಟ್ ಉದ್ಘಾಟಿಸಿದರು. ಬದಿಯಡ್ಕ ಭಾರತೀ ವಿದ್ಯಾಪೀಠದ ಪ್ರಧಾನಾಚಾರ್ಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ಮತ್ತು ನಮ್ಮ ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆ ಮಾರ್ಗ ಉಪಸ್ಥಿತರಿದ್ದರು. ಅಧ್ಯಾಪಕರು ಕಾರ್ಯಕ್ರಮದ ಗುಣಾತ್ಮಕ ಫಲಗಳನ್ನು ಪಡೆದುಕೊಂಡರು.