Aug 16, 2011

ಸ್ವಾತಂತ್ರ್ಯ ದಿನಾಚರಣೆ

ನಿನ್ನೆ ನಮ್ಮ ಸಂಸ್ಥೆಗಳಲ್ಲಿ ಜರಗಿದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು  ಸ್ವಾತಂತ್ರ್ಯ ಕುರಿತಾದ ಭಾಷಣಗಳನ್ನು ಮಾಡಿದರು. ಕುಂಬಳೆ ಗ್ರಾಮ ಪಂಚಾಯತು ಸದಸ್ಯೆ ಅಶ್ವಿನಿ ನಾಣಿಹಿತ್ತಿಲು, ಕುಂಬಳೆ ಗ್ರಾಮ ಪಂಚಾಯತು ಮಾಜಿ ಉಪಾಧ್ಯಕ್ಷ ಕೇಶವ ಪ್ರಸಾದ್ ನಾಣಿಹಿತ್ತಿಲು, ಆಡಳಿತ ಮಂಡಳಿ ಅಧ್ಯಕ್ಷ ಡಾ| ಡಿ.ಪಿ.ಭಟ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಕೃಷ್ಣ ಭಟ್ ಅಮ್ಮಂಕಲ್ಲು,  ಶಾಲಾ ಆಡಳಿತ ಮಂಡಳಿ ಸದಸ್ಯ ಶಾಮರಾಜ್ ದೊಡ್ಡಮಾಣಿ, ಕೃಷ್ಣಮೂರ್ತಿ ಪುದುಕೋಳಿ, ನಮ್ಮ ಶಾಲಾ ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್ ದರ್ಬೆಮಾರ್ಗ ಉಪಸ್ಥಿತರಿದ್ದರು.
    ವಿದ್ಯಾರ್ಥಿನಿ ಸ್ಮಿತಾ ಜಿ.ಎಲ್ ಸ್ವಾಗತಿಸಿ, ವಿದ್ಯಾರ್ಥಿ ಶ್ರೀಹರಿಶಂಕರ ಶರ್ಮ ಧನ್ಯವಾದ ಸಮರ್ಪಿಸಿದರು. ಮಹೇಶಕೃಷ್ಣ ತೇಜಸ್ವಿ.ಕೆ ಕರ್ಯಕ್ರಮ ನಿರೂಪಿಸಿದರು.

No comments:

Post a Comment