Oct 29, 2011

ಅಕ್ಟೋಬರ್ ತಿಂಗಳ ‘ಪ್ರತಿಭಾ ಭಾರತೀ’



“ಮುಜುಂಗಾವಿನ ಪ್ರಶಾಂತ ಪರಿಸರ, ದೇವಾಲಯದ ಸನಿಹದಲ್ಲಿ ವಿದ್ಯಾರ್ಜನೆ ಮಾಡುವುದು ಒಂದು ಸುಯೋಗ. ಆಧುನಿಕತೆಯ ಕಡೆಗೆ ಪೂರ್ತಿಯಾಗಿ ಮುಖ ಮಾಡದೆ ಇನ್ನೂ ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡಿದ ವಿದ್ಯಾಭ್ಯಾಸ ನೀಡುತ್ತಿರುವ ಶ್ರೀ ಭಾರತೀ ವಿದ್ಯಾಪೀಠ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ದಾರಿಯನ್ನು ನಿರಂತರವಾಗಿ ತೋರುತ್ತಿದೆ. ಇದು ವಿದ್ಯಾರ್ಥಿಗಳ ಬಹುಮುಖಿ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ನಿರ್ವಹಿಸಲಿದೆ." ಎಂದು ಸಾಹಿತಿ ಜಯಶ್ರೀ ಶ್ರೀಕೃಷ್ಣಯ್ಯ ಅನಂತಪುರ ಅಭಿಪ್ರಾಯಪಟ್ಟರು. ಅವರು ನಿನ್ನೆ ನಮ್ಮ ವಿದ್ಯಾಪೀಠದಲ್ಲಿ ಜರಗಿದ ಅಕ್ಟೋಬರ್ ತಿಂಗಳ ‘ಪ್ರತಿಭಾ ಭಾರತೀ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ಶಾಲಾ ಆಡಳಿತ ಮಂಡಳಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ ಮತ್ತು ಶಾಲಾ ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್ ದರ್ಬೆ ಮಾರ್ಗ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿ ಜೀವಿತ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಾದ ಸುಪ್ರೀತಾ ಸ್ವಾಗತಿಸಿ, ದೀಪಕ್ ಶ್ರೀವತ್ಸ ವಂದಿಸಿದರು. ಕಾರ್ತಿಕ್. ಎಸ್ ಮತ್ತು ರಕ್ಷಿತ್ ಕಾರ್ಯಕ್ರಮ ನಿರೂಪಿಸಿದರು.

No comments:

Post a Comment