May 2, 2012

‘ಭವಿಷ್ಯ - 2012’ : ಅವಲಂಬನದ ಕಾರ್ಯಾಗಾರ

ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವೀಜಿಯವರ ಮಾರ್ಗದರ್ಶನದಲ್ಲಿ ಬೆಂಗಳೂರಿನ ಆಸಕ್ತ ಯುವಕರ ‘ಅವಲಂಬನ’ ತಂಡ ಪ್ರೌಢಶಾಲೆ ಮತ್ತು ಪಿ. ಯು.. ಸಿ. ಹಂತದ ವಿದ್ಯಾರ್ಥಿಗಳಿಗೂ ರಕ್ಷಕರಿಗೂ ಬದಲಾಗುತ್ತಿರುವ ಜಗತ್ತಿನ ನೂತನ ಅವಕಾಶಗಳನ್ನು ಪರಿಚಯಿಸುವ ದೃಷ್ಟಿಯಿಂದ ‘ಭವಿಷ್ಯ - 2012’ ಕಾರ್ಯಾಗಾರವನ್ನು 05 ಮೇ 2012 ಶನಿವಾರ ಮತ್ತು 06 ಮೇ 2012 ಭಾನುವಾರ, 9.30 ರಿಂದ ಸಂಜೆಯ ತನಕ ನಮ್ಮ ವಿದ್ಯಾಪೀಠದಲ್ಲಿ ಆಯೋಜಿಸಿದೆ.

    ಹವ್ಯಕರಿಂದ ಹವ್ಯಕರಿಗಾಗಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಭಾರತೀಯ ಸಂಸ್ಕೃತಿ ಆಧಾರಿತ ವ್ಯಕ್ತಿತ್ವ ವಿಕಸನ, ವಿದ್ಯಾರ್ಥಿಗಳ ನೈಜ ಆಸಕ್ತಿ ಅರಿವಿಗೆ ಮನೋವೈಜ್ನಾನಿಕಪರೀಕ್ಷೆ  ಮತ್ತು ಅದರ ವಿಶ್ಲೇಷಣೆ,  ಮಹತ್ಸಾಧನೆಗೆ ಬೇಕಾದ ಮಾನಸಿಕ ಮತ್ತು ದೈಹಿಕ ಸಿದ್ಧತೆಗಳು, ಎಂಜಿನೀಯರಿಂಗ್ ವಿಭಾಗದ ಅವಕಾಶ ಮತ್ತು ಅದರ ತಯಾರಿ, ಐ.ಪಿ.ಎಸ್, ಐ.. ಏ. ಎಸ್ ಇತ್ಯಾದಿ ಆಡಳಿತಾತ್ಮಕ ಸೇವೆಗಳು, ಮೂಲಭೂತ ವಿಜ್ಞಾನ ಕ್ಷೇತ್ರದಲ್ಲಿನ ಉದ್ಯೋಗಾವಕಾಶಗಳು ಮತ್ತು ವಿದ್ಯಾರ್ಥಿಗಳಿಗೆ ದೊರೆಯುವ ವಿವಿಧ ವಿದ್ಯಾರ್ಥಿವೇತನಗಳು ಹಾಗೂ ಸಂಗೀತ/ಲಲಿತಕಲೆ/ಪತ್ರಿಕೋದ್ಯಮ ಕ್ಷೇತ್ರದಲ್ಲಿನ ಅವಕಾಶಗಳ ಬಗ್ಗೆ ಮಾಹಿತಿ ನೀಡಲಾಗುವುದು.

No comments:

Post a Comment