Jun 14, 2012

“ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಿ: ಡಿ.ರಾಮ ಭಟ್"


    “ಶಾಲೆಯಲ್ಲಿ ತಿಳಿದುಕೊಳ್ಳಲು ಸೌಕರ್ಯವಿಲ್ಲದ ಹಲವಾರು ವಿಚಾರಗಳನ್ನು ತಿಳಿದುಕೊಳ್ಳುವುದಕ್ಕಾಗಿ ವಿದ್ಯಾರ್ಥಿಗಳಿಗೆ ಬೇಸಗೆ ರಜೆಯನ್ನು ನೀಡಲಾಗುವುದು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮಗಿಷ್ಟವಾದ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಕಲಿಯುವಿಕೆ ನಿರಂತರ. ಗುರುಗಳ ಮೂಲಕ, ಸಹಪಾಠಿಗಳ ಮೂಲಕ ಹಾಗೂ ಸ್ವಂತ ಪರಿಶ್ರಮದ ಮೂಲಕ ಕಾಲಾನುಕ್ರಮದಲ್ಲಿ ಕಲಿತ ವಿಚಾರಗಳನ್ನು ಮೈಗೂಡಿಸಿಕೊಂಡು ನಾವು ರಾಮರಾಜ್ಯದ ಕನಸನ್ನು ನನಸು ಮಾಡಲು ಸಾಧ್ಯವಿರುವ ಶಕ್ತಿವಂತರಾಗಬೇಕು" ಎಂದು ನಿವೃತ್ತ ಮುಖ್ಯೋಪಾಧ್ಯಾಯ ದೊಡ್ಡಮಾಣಿ ರಾಮ ಭಟ್ ಅಭಿಪ್ರಾಯಪಟ್ಟರು. ಅವರು ೩೧.೦೩.೨೦೧೨ ಶನಿವಾರ ನಮ್ಮ ವಿದ್ಯಾಪೀಠದಲ್ಲಿ ಜರಗಿದ ‘ಪ್ರತಿಭಾ ಭಾರತೀ’ ಕಾರ್ಯಕ್ರಮದ ವಾರ್ಷಿಕ ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

    ಎಂಟನೇ ತರಗತಿ ವಿದ್ಯಾರ್ಥಿ ಕಾರ್ತಿಕ್. ಎಸ್ ಅಧ್ಯಕ್ಷತೆ ವಹಿಸಿದರು. ಶಾಲಾ ಆಡಳಿತ ಮಂಡಳಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಭೆಮಾರ್ಗ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಅಶ್ವತಿ ಸ್ವಾಗತಿಸಿ ಕವಿತಾ.ಕೆ ವಂದಿಸಿದರು. ಗೌರೀಶ್ ವಿಶ್ವಾಮಿತ್ರ ಮತ್ತು ದೀಪಕ್ ಶ್ರೀವತ್ಸ ಕಾರ್ಯಕ್ರಮ ನಿರೂಪಿಸಿದರು. ೨೧೪ ಶಾಲಾ ದಿನಗಳಲ್ಲಿ ಪೂರ್ಣ ಹಾಜರಾತಿಯನ್ನು ಪಡೆದ ೨೭ ಮಂದಿ ವಿದ್ಯಾರ್ಥಿಗಳಿಗೆ ‘ಅಗ್ರೇಸರ’ ಪ್ರಶಸ್ತಿ ನೀಡಲಾಯಿತು.

No comments:

Post a Comment