Jul 6, 2012

ಪ್ರತಿಭಾ ಭಾರತೀ

“ಮುಜುಂಗಾವು ವಿದ್ಯಾಪೀಠದ ವಿದ್ಯಾರ್ಥಿಗಳ ಶಿಸ್ತು ಇತರರಿಗೆ ಮಾದರಿ. ಉತ್ತಮ ಮಟ್ಟದ ಶಿಕ್ಷಣ ಇಲ್ಲಿ ನೀಡಲಾಗುತ್ತಿರುವುದರ ಅಭಿವ್ಯಕ್ತಿ ಅದು. ವಿದ್ಯಾರ್ಥಿಗಳಿಗೆ ಇಲ್ಲಿ ದೊರೆಯುವ ಉತ್ತಮ ಶಿಕ್ಷಣ ಸಮಾಜದ ಅಭಿವೃದ್ಧಿಗೆ ಪೂರಕವಾಗಲಿ" ಎಂದು ಕೇಂದ್ರ ಮಹಿಳಾ ಪರಿಷತ್ತು ಸಂಚಾಲಕಿ ಈಶ್ವರಿ ಎಸ್. ಬೇರ್ಕಡವು ಅಭಿಪ್ರಾಯಪಟ್ಟರು. ಅವರು ನಮ್ಮ ವಿದ್ಯಾಪೀಠದಲ್ಲಿ ೦೪.೦೭.೨೦೧೨ ಬುಧವಾರ ಜರಗಿದ ಹೊಸ ಅಧ್ಯಯನ ವರ್ಷದ ಪ್ರಥಮ ‘ಪ್ರತಿಭಾ ಭಾರತೀ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ಶಾಲಾ ಸೇವಾ ಸಮಿತಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ ಮತ್ತು ಶಾಲಾ ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್ ದರ್ಬೆ ಮಾರ್ಗ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿ ದೀಪಕ್ ಶ್ರೀವತ್ಸ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಾದ ಕವಿತಾ ಸ್ವಾಗತಿಸಿ, ವೈಶಾಲಿ ವಂದಿಸಿದರು. ಶ್ವೇತಾ ಮತ್ತು ನವನೀತ ಕಾರ್ಯಕ್ರಮ ನಿರೂಪಿಸಿದರು.

No comments:

Post a Comment