Aug 10, 2012

ರಕ್ಷಕ ಶಿಕ್ಷಕ ಸಂಘ ಮಹಾಸಭೆ

ನಮ್ಮ ವಿದ್ಯಾಪೀಠದ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯು 26.07.2012 ಗುರುವಾರ ಜರಗಿತು. ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್ ದರ್ಬೆ-ಮಾರ್ಗ ವರದಿ ವಾಚಿಸಿದರು. ರಕ್ಷಕ ಶಿಕ್ಷಕ ಸಂಘದ ನಿಕಟ ಪೂರ್ವ ಅಧ್ಯಕ್ಷ ಅಮ್ಮಂಕಲ್ಲು ಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದರು. ಸೇವಾ ಸಮಿತಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ ಉಪಸ್ಥಿತರಿದ್ದರು. ಸಂಘದ ನೂತನ ಅಧ್ಯಕ್ಷರನ್ನಾಗಿ ಎಂ.ಚಂದ್ರಶೇಖರ ಭಟ್, ಬೆಜ್ಪೆ ಇವರನ್ನು ಸರ್ವಾನುಮತದಿಂದ ಆರಿಸಲಾಯಿತು.

ರಕ್ಷಕ ಶಿಕ್ಷಕ ಸಂಘದ ನೂತನ ಸಮಿತಿಯ ಉಪಾಧ್ಯಕ್ಷರನ್ನಾಗಿ ಎಚ್.ಶಂಕರನಾರಾಯಣ ಭಟ್ ಎಡನಾಡು, ಚಿತ್ರಾ ನಾಯ್ಕಾಪು ಇವರನ್ನು ಆರಿಸಲಾಯಿತು.

ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಎ.ಕೃಷ್ಣ ಭಟ್ ಅಮ್ಮಂಕಲ್ಲು, ಸುಬ್ರಾಯ ಹೇರಳ, ಡಿ.ಕೃಷ್ಣಮೂರ್ತಿ ಪಾಡಿ, ಪುರುಷೋತ್ತಮ ಆಚಾರ್ಯ ಸೂರಂಬೈಲು, ಮಮತಾ ನಂದಗೋಕುಲ, ಕಮಲಾಕ್ಷಿ ಸೂರಂಬೈಲು, ಶೋಭಾ ನಾಯ್ಕಾಪು, ನಾಗವೇಣಿ ಯವರ ಜೊತೆ ಅಧ್ಯಾಪಕ ವೃಂದವನ್ನು ಆಯ್ಕೆ ಮಾಡಲಾಯಿತು. ಸಂಘದ ಕಾರ್ಯದರ್ಶಿ ಹಾಗೂ ಕೋಶಾಧಿಕಾರಿಗಳಾಗಿ ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್ ದರ್ಬೆ-ಮಾರ್ಗ ಅವರನ್ನು ಆರಿಸಲಾಯಿತು.

No comments:

Post a Comment