Aug 18, 2012

ಅಗೋಸ್ತು ತಿಂಗಳ ‘ಪ್ರತಿಭಾ ಭಾರತೀ’


    “ಶಿಸ್ತು, ಸಂಯಮ ನಮ್ಮ ಜೀವನದ ಅವಿಭಾಜ್ಯ ಘಟಕಗಳಾಗಿರಬೇಕು. ಅವುಗಳು ಜೀವನದ ಪರಿಪೂರ್ಣತೆಯ ಕಡೆಗೆ ನಮ್ಮನ್ನು ಕೊಂಡೊಯ್ಯುತ್ತವೆ. ಅಂತಹ ಮೌಲ್ಯಾಧಾರಿತ ಶಿಕ್ಷಣ ಇಲ್ಲಿ ದೊರೆಯುತ್ತಿರುವುದು ತುಂಬ ಸಂತಸ ತಂದಿದೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಇದು ಭದ್ರ ತಳಪಾಯವನ್ನು ಕಟ್ಟಿಕೊಡಲಿದೆ" ಎಂದು ನಿವೃತ್ತ ಮುಖ್ಯೋಪಾಧ್ಯಾಯ ಎಸ್.ವೆಂಕಟ್ರಮಣ ಭಟ್ ಅಭಿಪ್ರಾಯಪಟ್ಟರು. ಅವರು ನಿನ್ನೆ ನಮ್ಮ ವಿದ್ಯಾಪೀಠದಲ್ಲಿ ಜರಗಿದ ಅಗೋಸ್ತು ತಿಂಗಳ ‘ಪ್ರತಿಭಾ ಭಾರತೀ’ ಕಾರ್ಯಕ್ರಮ ಮತ್ತು ರಾಮಾಯಣ ಮಾಸಾಚರಣೆ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

    ಶಾಲಾ ಸೇವಾ ಸಮಿತಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ ಮತ್ತು ಶಾಲಾ ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್ ದರ್ಬೆ ಮಾರ್ಗ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿ ಸಚಿನ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಾದ ಶ್ರೀಜಾ ಸ್ವಾಗತಿಸಿ, ವಿದ್ಯಾಶ್ರೀ ವಂದಿಸಿದರು. ರೇಶ್ಮಾ. ಆರ್ ಮತ್ತು ಕುಮಾರ ಸುಬ್ರಹ್ಮಣ್ಯ ಕಾರ್ಯಕ್ರಮ ನಿರೂಪಿಸಿದರು.

No comments:

Post a Comment