Aug 10, 2012

ಶ್ರೀಕೃಷ್ಣ ಜಯಂತಿ

“ಕೃಷ್ಣನ ಲೀಲೆಗಳು ಸಮಾಜದ ಪ್ರಗತಿಗೆ ಕಾರಣವಾಗಿದೆ, ಧರ್ಮದ ಪುನರುತ್ಥಾನ ಅವನು ನಡೆಸಿದ ಮಹಾನ್ ಕಾರ್ಯ.  ಶ್ರೀಕೃಷ್ಣನ ಜನ್ಮ ದಿನದ ಆಚರಣೆ ವಿದ್ಯಾರ್ಥಿಗಳಿಗೆ ಅವನ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ನೆರವಾಗುವುದು" ಎಂದು ಕೆ.ವೆಂಕಟ್ರಮಣ ಭಟ್, ಕುದ್ರೆಪ್ಪಾಡಿ ಹೇಳಿದರು. ಅವರು 09.08.2012 ಗುರುವಾರ ವಿದ್ಯಾಪೀಠದಲ್ಲಿ ಜರಗಿದ ‘ಶ್ರೀಕೃಷ್ಣ ಜಯಂತಿ’ ಉತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ಸೀತಾಂಗೋಳಿ ವಲಯ ಕಾರ್ಯದರ್ಶಿ ಎಚ್.ಸತ್ಯಶಂಕರ ಭಟ್ ಅಧ್ಯಕ್ಷತೆ ವಹಿಸಿದ್ದರು. ಶ್ರೀಭಾರತೀ ವಿದ್ಯಾಸಂಸ್ಥೆಗಳ ಸೇವಾ ಸಮಿತಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ ಮತ್ತು ಶ್ರೀ ಭಾರತೀ ವಿದ್ಯಾಪೀಠ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆ-ಮಾರ್ಗ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಸ್ಮಿತಾ ಸ್ವಾಗತಿಸಿ, ಗಾಯತ್ರಿ.ಎಸ್.ಕಾರಂತ್ ವಂದಿಸಿದರು. ರಾಜೇಶ್ವರಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಗೌರೀಶ ವಿಶ್ವಾಮಿತ್ರ ಪ್ರಾರ್ಥಿಸಿದರು. ಜನ್ಮಾಷ್ಟಮಿಯ ಅಂಗವಾಗಿ ಜರಗಿದ ಮುದ್ದುಕೃಷ್ಣ ವೇಷ ಪ್ರದರ್ಶನ ಮತ್ತು ಇತರ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

No comments:

Post a Comment