Jan 19, 2013

ನಾಳೆ, ಶಾಲಾ ವರ್ಧಂತ್ಯುತ್ಸವ

ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಶ್ರೀ ಭಾರತೀ ಸಮೂಹ ವಿದ್ಯಾ ಸಂಸ್ಥೆಗಳ ವರ್ಧಂತ್ಯುತ್ಸವವು ನಾಳೆ, ದಿನಾಂಕ ೨೦.೦೧.೨೦೧೩ ಭಾನುವಾರ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಬೆಳಗ್ಗೆ ೯.೩೦ಕ್ಕೆ ಮಂಗಳೂರು ಎನ್.ಎಂ.ಪಿ.ಟಿ ಯ ನಿವೃತ್ತ ಅಧಿಕಾರಿ ಶ್ರೀ ಕೆ. ರಾಮ ಕಾರಂತ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
 ದಿನವಿಡೀ ವಿದ್ಯಾರ್ಥಿಗಳಿಂದ ನೃತ್ಯ, ಯಕ್ಷಗಾನ ಸಹಿತ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ ೪ ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸಮೂಹ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಡಾ| ಡಿ.ಪಿ.ಭಟ್ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕುಂಬಳೆ ಗ್ರಾಮ ಪಂಚಾಯತು ಸದಸ್ಯೆ ಶ್ರೀಮತಿ ಅಶ್ವಿನಿ ನಾಣಿತ್ತಿಲು, ನಿವೃತ್ತ ಕೆ.ಎಸ್.ಇ.ಬಿ ಅಧಿಕಾರಿ ಶ್ರೀ ಡಿ. ಗೋಪಾಲಕೃಷ್ಣ ಭಟ್, ಶಾಂತಿಪಳ್ಳದ ಶ್ರೀ ಹಿಲರಿ ಡಿ’ ಸೋಜ, ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಶ್ರೀ ಕರುಣಾಕರ ಅನಂತಪುರ, ಕೇರಳ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಮಹಾಲಿಂಗೇಶ್ವರ ಭಟ್ ಎಂ.ವಿ ಅಭ್ಯಾಗತರಾಗಿ ಆಗಮಿಸಲಿದ್ದಾರೆ. ನೀವೂ ಬನ್ನಿ...

No comments:

Post a Comment