Jun 1, 2013

ವಸಂತ ವೇದ ಶಿಬಿರ ಸಮಾರೋಪ

 
   “ವೇದ ಅಧ್ಯಯನ ಜೀವನದಲ್ಲಿ ಶಿಸ್ತು ಅಳವಡಿಸಿಕೊಳ್ಳುವುದಕ್ಕೆ ಕಾರಣವಾಗುತ್ತದೆ. ಪ್ರಸ್ತುತ ಸಮಾಜದಲ್ಲಿ ವೇದ ಮತ್ತು ಶಾಸ್ತ್ರಗಳ ಅಧ್ಯಯನದ ಕಡೆಗೆ ಜನ ಹೆಚ್ಚು ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜನಸಾಮಾನ್ಯರ ಅಪೇಕ್ಷೆಯಂತೆ ಮುಜುಂಗಾವಿನ ದೇವ-ವೈದ್ಯ-ವೇದಗಳ ಸಂಗಮ ಭೂಮಿಯಲ್ಲಿ ನಡೆದ ವಸಂತವೇದ ಶಿಬಿರ ಯಶಸ್ವಿಯಾಗಿದೆ ಎಂದು ಸೀತಾಂಗೋಳಿ ವಲಯ ಕಾರ್ಯದರ್ಶಿ ಎಚ್.ಸತ್ಯಶಂಕರ ಭಟ್ ಹಿಳ್ಳೆಮನೆ ಅಭಿಪ್ರಾಯಪಟ್ಟರು. ಅವರು 19.05.2013 ಭಾನುವಾರ ನಮ್ಮ ವಿದ್ಯಾಪೀಠದಲ್ಲಿ ಕಳೆದ ಒಂದೂವರೆ ತಿಂಗಳು ಕಾಲ ವೇ|ಮೂ ಮಹಾದೇವ ಭಟ್ ಕೋಣಮ್ಮೆ ಇವರ ನೇತೃತ್ವದಲ್ಲಿ ಜರಗಿದ ವಸಂತ ವೇದ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಬೆಂಗಳೂರು ‘ಬೆಲ್’ ಸಂಸ್ಥೆಯ ಇಂಜಿನಿಯರ್ ರಾಮಮೂರ್ತಿ ಮುಖ್ಯ ಅತಿಥಿಗಳಾಗಿದ್ದರು. ವೇದ ಶಿಕ್ಷಣ ನೀಡಿದ ವೇ|ಮೂ ವಿಶ್ವೇಶ್ವರ ಭಟ್ ಮಣಿಮುಂಡ, ನಾರಾಯಣ.ಜಿ.ಹೆಗಡೆ ಮತ್ತು ಶ್ಯಾಮ ಭಟ್ ದರ್ಭೆಮಾರ್ಗ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಮನೀಶ ಅಮ್ಮಂಕಲ್ಲು ಸ್ವಾಗತಿಸಿ ಶಶಿಧರ ಪದ್ಯಾಣ ವಂದಿಸಿದರು. ಕೃಷ್ಣಕುಮಾರ ಕೋಣಮ್ಮೆ ಕಾರ್ಯಕ್ರಮ ನಿರೂಪಿಸಿದರು.

No comments:

Post a Comment