Jul 22, 2013

ಗುರುಪೂರ್ಣಿಮಾ

   
“ಗುರುಪೂರ್ಣಿಮೆಯ ದಿನ ವ್ರತಾನುಷ್ಠಾನ ಆರಂಭಿಸುವ ಸನ್ಯಾಸಿಗಳು ಆತ್ಮಜ್ಞಾನದ ವೃದ್ಧಿಯ ಕಡೆಗೆ ಮುನ್ನಡೆಯುತ್ತಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೂ ಕೂಡಾ ಗುರುಪೂರ್ಣಿಮೆಯನ್ನು ಆಚರಿಸಿ ತಮ್ಮ ಮೇಧಾಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಪ್ರತಿನಿಧಿ ಕೆ.ಎಸ್.ಶಂಕರ ಭಟ್ ಕಾವೇರಿಕಾನ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ವಿದ್ಯಾಪೀಠದಲ್ಲಿ ಜರಗಿದ ಗುರುಪೂರ್ಣಿಮಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

    ಶಾಲಾ ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಮಿತಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ, ಹಿರಿಯ ಶಿಕ್ಷಕ ಕೃಷ್ಣ ಭಟ್ ಉಪಸ್ಥಿತರಿದ್ದರು. ಶಿಕ್ಷಕಿ ಚಿತ್ರಾ ಸರಸ್ವತಿ ಸ್ವಾಗತಿಸಿ ವಂದಿಸಿದರು.

Jul 21, 2013

ರಕ್ಷಕ ಶಿಕ್ಷಕ ಸಂಘದ ಮಹಾಸಭೆ - 2013


  “ಮನೆಯೇ ಮೊದಲ ಪಾಠಶಾಲೆ ಎನ್ನುವುದು ಸಾರ್ವಕಾಲಿಕ ಸತ್ಯ. ಶಾಲೆ, ಸಮಾಜ, ಪರಿಸ್ಥಿತಿಗಳು ಎಷ್ಟು ಬದಲಾದರೂ ವಿದ್ಯಾರ್ಥಿಗಳ ಕಡೆಗಿನ ಹೆಚ್ಚಿನ ಗಮನವನ್ನು ಹೆತ್ತವರೇ ಹೊತ್ತುಕೊಳ್ಳಬೇಕು, ಶಿಕ್ಷಕರು ಈ ನಿಟ್ಟಿನಲ್ಲಿ ಸಹಕಾರಿಗಳಾಗಿರಬೇಕು. ರಕ್ಷಕ ಮತ್ತು ಶಿಕ್ಷಕರ ಉತ್ತಮ ಬಾಂಧವ್ಯ ಶಾಲೆಯ ಬೆಳವಣಿಗೆಗೆ ಅತ್ಯಂತ ಅಪೇಕ್ಷಣೀಯ ಎಂದು ನಮ್ಮ ವಿದ್ಯಾಪೀಠದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಂ.ಚಂದ್ರಶೇಖರ ಭಟ್, ಬೆಜ್ಪೆ ಅಭಿಪ್ರಾಯಪಟ್ಟರು. ಅವರು ನಿನ್ನೆ ನಮ್ಮ ವಿದ್ಯಾಪೀಠದಲ್ಲಿ ಜರಗಿದ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

   ಶಾಲಾ ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್ ದರ್ಬೆ-ಮಾರ್ಗ ವರದಿ ವಾಚಿಸಿದರು. ಶಾಲಾ ಸಮಿತಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ, ಮಾತೃಮಂಡಳಿಯ ಅಧ್ಯಕ್ಷೆ ಕಮಲಾಕ್ಷಿ ಸೂರಂಬೈಲು ಉಪಸ್ಥಿತರಿದ್ದರು. ಶಿಕ್ಷಕಿ ರಾಜೇಶ್ವರಿ ಸ್ವಾಗತಿಸಿ ವಿದ್ಯಾ.ಎನ್ ಹೆಗಡೆ ವಂದಿಸಿದರು.

Jul 17, 2013

‘ವನಜೀವನ ಯಜ್ಞ-2013’

 


  “ಅರಣ್ಯ ಸಂರಕ್ಷಣೆಯು ನಮ್ಮೆಲ್ಲರ ಗುರಿ. ಸ್ವಚ್ಛ ಸಮಾಜದಲ್ಲಿ ಸುಂದರ ಪ್ರಕೃತಿಯ ಪಾತ್ರವೂ ಪ್ರಧಾನವಾದುದು. ನಾಡಿನಾದ್ಯಂತ ಸ್ವಾಭಾವಿಕ ಕಾಡುಗಳು ಮರೆಯಾಗಿ ಕಾಂಕ್ರೀಟ್ ಕಾಡುಗಳು ಏಳುತ್ತಿರುವುದು ಭವಿಷ್ಯದಲ್ಲಿ ಎದುರಾಗಬಲ್ಲ ಬರಗಾಲಕ್ಕೆ ಮುನ್ನುಡಿಯಾಗಿದೆ. ಅಂತಹ ಸಂಭವನೀಯ ಬರಗಾಲವನ್ನು ತಡೆಗಟ್ಟಲು ನಾವು ಈಗಲೇ ಜಾಗೃತರಾಗಬೇಕಾಗಿದೆ. ವಿದ್ಯಾರ್ಥಿಗಳಲ್ಲಿ ಹಸಿರಿನ ಕಡೆಗಿನ ಪ್ರೀತಿಯನ್ನು ಬೆಳೆಸಿ ಭವಿಷ್ಯವನ್ನು ಹಸನುಗೊಳಿಸಬೇಕಾಗಿದೆ.” ಎಂದು ಕಾಸರಗೋಡು ಜಿಲ್ಲಾ ಅರಣ್ಯಾಧಿಕಾರಿ ಜಯಮಾಧವನ್ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ವಿದ್ಯಾಪೀಠದಲ್ಲಿ ಜರಗಿದ ‘ವನಜೀವನ ಯಜ್ಞ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಶಾಲಾ ಸಮಿತಿಯ ಅಧ್ಯಕ್ಷ ಡಾ|ಡಿ.ಪಿ.ಭಟ್ ಅಧ್ಯಕ್ಷತೆ ವಹಿಸಿದ್ದರು. ಕುಂಬಳೆ ಗ್ರಾಮ ಪಂಚಾಯತು ಮಾಜಿ ಉಪಾಧ್ಯಕ್ಷ ಕೇಶವಪ್ರಸಾದ ನಾಣಿತ್ತಿಲು, ಕುಂಬಳೆ ಗ್ರಾಮ ಪಂಚಾಯತು ಸದಸ್ಯೆ ಶ್ರೀಮತಿ ಅಶ್ವಿನಿ ನಾಣಿತ್ತಿಲು, ಸಹ ಅರಣ್ಯಾಧಿಕಾರಿ ಜೇಮ್ಸ್ ಮುಖ್ಯ ಅತಿಥಿಗಳಾಗಿದ್ದರು. ಶಾಲಾ ಸಮಿತಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ, ವಿದ್ಯಾಪೀಠದ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆ ಮಾರ್ಗ ಉಪಸ್ಥಿತರಿದ್ದರು.

    ವಿದ್ಯಾರ್ಥಿಗಳಾದ ವಿಕ್ರಮ್ ಸ್ವಾಗತಿಸಿ ಪ್ರಜ್ವಲ್ ವಂದಿಸಿದರು. ಗೌರೀಶ ವಿಶ್ವಾಮಿತ್ರ ಕಾರ್ಯಕ್ರಮ ನಿರೂಪಿಸಿದರು.

Jul 13, 2013

ಪರಿಸರ ಮಾಹಿತಿ ಕಾರ್ಯಕ್ರಮ


   
“ಪರಿಸರ ಜನಜೀವನದ ಅವಿಭಾಜ್ಯ ಘಟಕ. ಶಾಂತ ಮತ್ತು ಸುಂದರ ಪರಿಸರ ಬದುಕಿಗೆ ಪೂರಕ ವಾತಾವರಣವನ್ನು ಕಟ್ಟಿಕೊಡುತ್ತವೆ. ಅಂತಹ ಪ್ರಕೃತಿ ನಮ್ಮ ಉಸಿರಾಗಬೇಕು. ಆ ಮೂಲಕ ನೆಮ್ಮದಿಯ ಜೀವನವನ್ನು ನಡೆಸಲು ಸಾಧ್ಯವಾಗಬೇಕು” ಎಂದು ನಮ್ಮ ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆ ಮಾರ್ಗ ಅಭಿಪ್ರಾಯಪಟ್ಟರು. ಅವರು 09.07.2013 ಮಂಗಳವಾರ ನಮ್ಮ ವಿದ್ಯಾಪೀಠದಲ್ಲಿ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ  ಜರಗಿದ ‘ಪರಿಸರ ಮಾಹಿತಿ ಕಾರ್ಯಕ್ರಮ’ದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ನಿವೃತ್ತ ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಜಿ.ವಿಘ್ನೇಶ್ವರ ಭಟ್ ಮುಖ್ಯ ಅತಿಥಿಗಳಾಗಿದ್ದರು. ದಿ|ಕೊಡಗಿನ ಗೌರಮ್ಮ ದತ್ತಿನಿಧಿ ಕಥಾಸ್ಪರ್ಧೆಯ ಸಂಚಾಲಕಿ ಶ್ರೀಮತಿ ವಿಜಯಾ ಸುಬ್ರಹ್ಮಣ್ಯ ಕುಂಬಳೆ ಉಪಸ್ಥಿತರಿದ್ದರು.

    ವಿದ್ಯಾರ್ಥಿಗಳಾದ ಜಯಶ್ರೀ.ಎಂ.ಸಿ ಸ್ವಾಗತಿಸಿ ಶ್ರಾವ್ಯ.ಕೆ ವಂದಿಸಿದರು. ಚೈತ್ರ.ಕೆ ಮತ್ತು ತಂಡ ಪ್ರಾರ್ಥನೆ ಮಾಡಿದರು. ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಯೋಜಕ ವಿನಾಯಕ ಕಾರ್ಯಕ್ರಮ ನಿರೂಪಿಸಿದರು.