Jul 22, 2013

ಗುರುಪೂರ್ಣಿಮಾ

   
“ಗುರುಪೂರ್ಣಿಮೆಯ ದಿನ ವ್ರತಾನುಷ್ಠಾನ ಆರಂಭಿಸುವ ಸನ್ಯಾಸಿಗಳು ಆತ್ಮಜ್ಞಾನದ ವೃದ್ಧಿಯ ಕಡೆಗೆ ಮುನ್ನಡೆಯುತ್ತಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೂ ಕೂಡಾ ಗುರುಪೂರ್ಣಿಮೆಯನ್ನು ಆಚರಿಸಿ ತಮ್ಮ ಮೇಧಾಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಪ್ರತಿನಿಧಿ ಕೆ.ಎಸ್.ಶಂಕರ ಭಟ್ ಕಾವೇರಿಕಾನ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ವಿದ್ಯಾಪೀಠದಲ್ಲಿ ಜರಗಿದ ಗುರುಪೂರ್ಣಿಮಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

    ಶಾಲಾ ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಮಿತಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ, ಹಿರಿಯ ಶಿಕ್ಷಕ ಕೃಷ್ಣ ಭಟ್ ಉಪಸ್ಥಿತರಿದ್ದರು. ಶಿಕ್ಷಕಿ ಚಿತ್ರಾ ಸರಸ್ವತಿ ಸ್ವಾಗತಿಸಿ ವಂದಿಸಿದರು.

No comments:

Post a Comment