Aug 15, 2013

ಸ್ವಾತಂತ್ರ್ಯ ದಿನಾಚರಣೆ 2013


“ಭಾರತದ ಸ್ವಾತಂತ್ರ್ಯ ವಿಭಿನ್ನ ರೀತಿಯ ಹೋರಾಟದಿಂದ ವಿಶ್ವದ ಗಮನವನ್ನು ಸೆಳೆದಿದೆ. ನಮ್ಮ ಹಿರಿಯರ ಕೆಚ್ಚೆದೆಯ ಪರಿಶ್ರಮದಿಂದ ಆಂಗ್ಲರ ಬಳಿಯಲ್ಲಿದ್ದ ಅಧಿಕಾರವನ್ನು ಪಡೆದುಕೊಳ್ಳಲು ನಮಗೆ ಸಾಧ್ಯವಾಯಿತು. ವಿದ್ಯಾರ್ಥಿಗಳು ಹಿರಿಯರ ತ್ಯಾಗ, ಬಲಿದಾನಗಳನ್ನು ಸ್ಮರಿಸಿ ಭವ್ಯ ಭಾರತದ ನಿರ್ಮಾಣಕ್ಕೆ ಪ್ರಯತ್ನಿಸಬೇಕು.” ಎಂದು ಕುಂಬಳೆ ಗ್ರಾಮ ಪಂಚಾಯತು ಸದಸ್ಯೆ ಅಶ್ವಿನಿ ನಾಣಿತ್ಲು ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶ್ರೀ ಭಾರತೀ ಸಮೂಹ ವಿದ್ಯಾ ಸಂಸ್ಥೆಗಳಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು.

ಶಾಲಾ ಸೇವಾ ಸಮಿತಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಎಚ್.ಶಂಕರನಾರಾಯಣ ಭಟ್, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆ ಮಾರ್ಗ ಉಪಸ್ಥಿತರಿದ್ದರು.

    ವಿದ್ಯಾರ್ಥಿಗಳಾದ ದೀಪಕ್ ಶ್ರೀವತ್ಸ ಸ್ವಾಗತಿಸಿ ಗೌರೀಶ ವಿಶ್ವಾಮಿತ್ರ ವಂದಿಸಿದರು. ಸ್ವಾತಿ ಘಾಟೆ ಕಾರ್ಯಕ್ರಮ ನಿರೂಪಿಸಿದರು.

No comments:

Post a Comment