“ಜಗತ್ತು ಹೊಸ ಅಭ್ಯಾಸಗಳ ಕಡೆಗೆ ಹೊರಳುತ್ತಿದೆ. ಜನರಲ್ಲಿ ಪರಸ್ಪರ ಅಸೂಯೆ, ದ್ವೇಷ ಹೆಚ್ಚುತ್ತಿದೆ. ಭಾರತ ಮಾತ್ರವಲ್ಲ, ಶಾಂತಿಪ್ರಿಯವಾದ ಅನೇಕ ದೇಶಗಳು ಯುದ್ಧ ಭೀತಿಯನ್ನು ಎದುರಿಸುತ್ತಿವೆ. ಈ ಸಂದರ್ಭದಲ್ಲಿ ರಕ್ಷಾಬಂಧನದ ಮಹತ್ವ ನಮಗೆ ಸುಲಭವಾಗಿ ಅರ್ಥವಾಗುತ್ತದೆ. ರಕ್ಷಾಬಂಧನದ ಮೂಲಕ ವಸುಧೈವ ಕುಟುಂಬಕಂ, ನಾವೆಲ್ಲ ಸಹೋದರರು ಎಂಬ ಭಾವನೆ ಬೆಳಗಬೇಕಿದೆ." ಎಂದು ಕುಂಬಳೆ ಹೋಲಿ ಫ್ಯಾಮಿಲಿ ಹಿರಿಯ ಬುನಾದಿ ಶಾಲೆಯ ಸಂಸ್ಕೃತ ಶಿಕ್ಷಕ ಬಾಲಕೃಷ್ಣ ಶರ್ಮ ಅಭಿಪ್ರಾಯಪಟ್ಟರು. ಅವರು 20.08.2013 ಮಂಗಳವಾರ ನಮ್ಮ ವಿದ್ಯಾಪೀಠದಲ್ಲಿ ಜರಗಿದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಶಾಲಾ ಸಮಿತಿಯ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಭಾರತೀ ಸಂಸ್ಕೃತ ಮಹಾವಿದ್ಯಾಲಯದ ಪ್ರಾಂಶುಪಾಲ ಕೃಷ್ಣಮೂರ್ತಿ ಪುದುಕೋಳಿ, ಶ್ರೀ ಭಾರತೀ ವಿದ್ಯಾಪೀಠದ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆಮಾರ್ಗ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸುಧನ್ವ ಶಂಕರ ಸ್ವಾಗತಿಸಿ ಶ್ವೇತಾ ವಂದಿಸಿದರು. ವಿದ್ಯಾಲಕ್ಷ್ಮಿ. ಎಸ್ ಕಾರ್ಯಕ್ರಮ ನಿರೂಪಿಸಿದರು.
No comments:
Post a Comment