Aug 31, 2013

ಗಮಕ ವಾಚನ - ಪ್ರವಚನ

     

  “ಪುರಾಣ ಪ್ರವಚನಗಳನ್ನು ಕೇಳುವ ಮೂಲಕ ನಮ್ಮ ಜ್ಞಾನಭಂಡಾರವನ್ನು ಹೆಚ್ಚಿಸಿಕೊಳ್ಳುವ ಅವಕಾಸವಿದೆ. ಈ ನಿಟ್ಟಿನಲ್ಲಿ ಅಪೂರ್ವವಾಗುತ್ತಿರುವ ಗಮಕ ಕಲೆಯನ್ನು ಉಳಿಸಿಕೊಳ್ಳಲು ನಾವೆಲ್ಲರೂ ಪ್ರಯತ್ನಿಸಬೇಕಾಗಿದೆ. ಈ ಉದ್ದೇಶದಿಂದ ಕುಶಲವರ ಜನ್ಮಮಾಸ ಶ್ರಾವಣವನ್ನು ಗಮಕ ಮಾಸವಾಗಿ ಆಚರಿಸಲಾಗುತ್ತಿದೆ ಎಂದು ಕರ್ನಾಟಕ ಗಮಕ ಕಲಾ ಪರಿಷತ್ತು, ಕೇರಳ ಗಡಿನಾಡು ಘಟಕದ ಅಧ್ಯಕ್ಷ ತೆಕ್ಕೇಕೆರೆ ಶಂಕರನಾರಯಣ ಭಟ್ ಹೇಳಿದರು. ಅವರು ನಿನ್ನೆ ನಮ್ಮ ವಿದ್ಯಾಪೀಠದಲ್ಲಿ ಕರ್ನಾಟಕ ಗಮಕ ಕಲಾ ಪರಿಷತ್ತು, ಕೇರಳ ಗಡಿನಾಡು ಘಟಕ ಆಯೋಜಿಸಿದ ‘ಗಮಕ ವಾಚನ’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಶಾಲಾ ಸಮಿತಿಯ ಅಧ್ಯಕ್ಷ ಡಾ|ಡಿ.ಪಿ.ಭಟ್, ಸಾಹಿತಿ ವಿ.ಬಿ.ಕುಳಮರ್ವ ಉಪಸ್ಥಿತರಿದ್ದರು. ಇಚ್ಲಂಪಾಡಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಭಾರತಿ ಗಮಕ ವಾಚನ ನಡೆಸಿದರು.  ಇಚ್ಲಂಪಾಡಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ನರಹರಿ.ಪಿ ಪ್ರವಚನ ನೀಡಿದರು.
    ಮುಜುಂಗಾವು ಶ್ರೀಭಾರತೀ ವಿದ್ಯಾಪೀಠದ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆಮಾರ್ಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿಗಳಾದ ದೀಕ್ಷಿತಾ.ಬಿ ಸ್ವಾಗತಿಸಿ ಕಾರ್ತಿಕ್.ಎಸ್ ವಂದಿಸಿದರು. ಶುಭಲಕ್ಷ್ಮಿ ಯಾಜಿ ಕಾರ್ಯಕ್ರಮ ನಿರೂಪಿಸಿದರು.

No comments:

Post a Comment