“ಜೀವನದ ಭದ್ರತೆಗೆ ಬ್ಯಾಂಕಿಂಗ್ ಅಗತ್ಯ. ಹಾಗಾಗಿ ವಿದ್ಯಾರ್ಥಿ ದೆಸೆಯಲ್ಲಿಯೇ ಉಳಿತಾಯದ ಮಹತ್ವವನ್ನು ಮನಗ೦ಡು ಅಭ್ಯಾಸ ಮಾಡಿಕೊಳ್ಳಬೇಕು. ನಾಳೆಗಾಗಿ ಹಣವನ್ನು ಜೋಪಾನವಾಗಿ ಕಾಪಾಡಿಕೊಳ್ಳಲು ಮತ್ತು ಅಗತ್ಯಗಳಿಗಾಗಿ ಸಾಲ ಸೌಲಭ್ಯವನ್ನು ಪಡೆದುಕೊಳ್ಳಲು ಬ್ಯಾಂಕಿಂಗ್ ಉತ್ತಮ ವ್ಯವಸ್ಥೆಯಾಗಿದೆ ಎಂದು ನಬಾರ್ಡ್ ಸಂಸ್ಥೆಯ ಫಿನಾನ್ಶಿಯಲ್ ಲಿಟರಸಿ ಏಜೆನ್ಸಿಯ ಜಗನ್ನಾಥ ಶೆಟ್ಟಿ ಕುಂಬಳೆ ಅಭಿಪ್ರಾಯಪಟ್ಟರು. ಅವರು
ನಿನ್ನೆ 09.10.2013 ಮಂಗಳವಾರ ನಮ್ಮ ವಿದ್ಯಾಪೀಠದಲ್ಲಿ ನಡೆದ ಬ್ಯಾಂಕಿಂಗ್ ಮಾಹಿತಿ ಶಿಬಿರದಲ್ಲ್ಲಿ ಮಾತನಾಡುತ್ತಿದ್ದರು.
ಶಾಲಾ ಸಮಿತಿಯ ಶ್ಯಾಮರಾಜ್ ದೊಡ್ಡಮಾಣಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆಮಾರ್ಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ಸ್ಮಿತಾ ಆಳ್ವ ಸ್ವಾಗತಿಸಿ ವಂದಿಸಿದರು.
ಶಾಲಾ ಸಮಿತಿಯ ಶ್ಯಾಮರಾಜ್ ದೊಡ್ಡಮಾಣಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆಮಾರ್ಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ಸ್ಮಿತಾ ಆಳ್ವ ಸ್ವಾಗತಿಸಿ ವಂದಿಸಿದರು.
No comments:
Post a Comment