Mar 30, 2014

ಮಾರ್ಚ್ ತಿಂಗಳ ‘ಪ್ರತಿಭಾ ಭಾರತೀ’

   

“ಜಗತ್ತು ಆಧುನಿಕತೆಯ ಕಡೆಗೆ ನಡೆಯುತ್ತಿರುವ ಸಂದರ್ಭದಲ್ಲಿ ಜನರೆಲ್ಲ ಹೆಚ್ಚುಹೆಚ್ಚು ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಸಂವಹನ ಮಾರ್ಗಗಳು ಹೆಚ್ಚಿದ್ದರೂ ಬಾಂಧವ್ಯ ಕಡಿಮೆಯಾಗುತ್ತಿದೆ. ಮುಜುಂಗಾವಿನ ಪ್ರಶಾಂತ ವಾತಾವರಣದಲ್ಲಿ ಶಿಕ್ಷಣವನ್ನು ಪಡೆಯುವ ವಿದ್ಯಾರ್ಥಿಗಳು ಕರ್ತವ್ಯಶೀಲತೆಯನ್ನೂ ಪ್ರಾಮಾಣಿಕತೆಯನ್ನೂ ಮೈಗೂಡಿಸಿಕೊಳ್ಳಬೇಕು ಎಂದು ನಿವೃತ್ತ ನ್ಯಾಯವಾದಿ ಕಾಕುಂಜೆ ಸುಬ್ರಹ್ಮಣ್ಯ ಭಟ್ ಅಭಿಪ್ರಾಯಪಟ್ಟರು. ಅವರು ಮೊನ್ನೆ 28.03.2014 ಶುಕ್ರವಾರ ನಮ್ಮ ವಿದ್ಯಾಪೀಠದಲ್ಲಿ ಜರಗಿದ ಮಾರ್ಚ್ ತಿಂಗಳ ‘ಪ್ರತಿಭಾ ಭಾರತೀ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ವಿದ್ಯಾರ್ಥಿ ಗೌರೀಶ ವಿಶ್ವಾಮಿತ್ರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಂ.ಚಂದ್ರಶೇಖರ ಭಟ್ ಮಡ್ವ, ಶಾಲಾ ಸಮಿತಿಯ ಕಾರ್ಯದರ್ಶಿ ಎಚ್.ಸತ್ಯಶಂಕರ ಭಟ್, ಶಾಲಾ ಸಮಿತಿಯ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆ ಮಾರ್ಗ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿ ನಾಯಕಿ ಶ್ವೇತಾ.ಕೆ ಪ್ರಾಸ್ತಾವಿಕ ಭಾಷಣ ಮಾಡಿದರು.

    ವಿದ್ಯಾರ್ಥಿಗಳಾದ ಸಂಕೇತ.ಎಂ ಸ್ವಾಗತಿಸಿ ಮಾನಸ.ಎನ್ ವಂದಿಸಿದರು. ದೀಪಕ್ ಶ್ರೀವತ್ಸ ಕಾರ್ಯಕ್ರಮ ನಿರೂಪಿಸಿದರು.