“ಪ್ರಾಚೀನ
ಮತ್ತು ಪರಂಪರಾಗತವಾಗಿ ಬಂದ ಎಲ್ಲ ಅಧ್ಯಯನಗಳೂ ವೇದದ ತಳಹದಿಯಲ್ಲಿ ಬೆಳೆದಿವೆ. ವೇದದ ಅಧ್ಯಯನವು ಜೀವನದಲ್ಲಿ
ಶಿಸ್ತು ಅಳವಡಿಸಿಕೊಳ್ಳುವುದಕ್ಕೆ ಕಾರಣವಾಗುತ್ತದೆ. ಮುಜುಂಗಾವಿನ ದೇವ-ವೈದ್ಯ-ವೇದಗಳ ಸಂಗಮ ಭೂಮಿಯಲ್ಲಿ
ನಡೆಯುವ ಈ ವಸಂತವೇದ ಶಿಬಿರವು ಯಶಸ್ವಿಯಾಗಲಿ" ಎಂದು ಕುಂಬಳೆ ವಲಯ ಕಾರ್ಯದರ್ಶಿ ಎಚ್.ಸತ್ಯಶಂಕರ ಭಟ್
ಹಿಳ್ಳೆಮನೆ ಅಭಿಪ್ರಾಯಪಟ್ಟರು. ಅವರು 10.04.2014 ಗುರುವಾರ ನಮ್ಮ ವಿದ್ಯಾಪೀಠದಲ್ಲಿ
ವೇ|ಮೂ ಮಹಾದೇವ ಭಟ್ ಕೋಣಮ್ಮೆ ಇವರ ನೇತೃತ್ವದಲ್ಲಿ ಆಯೋಜಿಸಲಾದ ವಸಂತ ವೇದ ಶಿಬಿರದ ಉದ್ಘಾಟನೆಯನ್ನು
ನಿರ್ವಹಿಸಿ ಮಾತನಾಡುತ್ತಿದ್ದರು.
ವೇದ
ಶಿಕ್ಷಣ ನೀಡುವ ವೇ|ಮೂ ವಿಶ್ವೇಶ್ವರ ಭಟ್ ಮಣಿಮುಂಡ, ನಾರಾಯಣ.ಜಿ.ಹೆಗಡೆ ಮತ್ತು ಶ್ಯಾಮ ಭಟ್ ದರ್ಭೆಮಾರ್ಗ
ಉಪಸ್ಥಿತರಿದ್ದರು. ಶ್ರೀ ಭಾರತೀ ಸಮೂಹ ವಿದ್ಯಾ ಸಂಸ್ಥೆಗಳ ಜತೆಕಾರ್ಯದರ್ಶಿ ಶ್ಯಾಮರಾಜ ದೊಡ್ಡಮಾಣಿ
ಸ್ವಾಗತಿಸಿದರು. ಶ್ರೀ ಭಾರತೀ ವಿದ್ಯಾಪೀಠದ ಶಿಕ್ಷಕಿ ಚಿತ್ರಾ ಸರಸ್ವತಿ.ಕೆ ವಂದಿಸಿದರು.