Jun 16, 2014

`ವಸಂತ ವೇದ ಶಿಬಿರ - 2014' ಸಮಾರೋಪ



ಭಾರತದ ಅಮೂಲ್ಯ ಸಂಪತ್ತು ಎಂದು ಪರಿಗಣಿಸಲ್ಪಟ್ಟಿರುವ ವೇದಗಳಲ್ಲಿ ಅಪಾರ ಜ್ಞಾನ ಅಡಗಿದೆ. ಅವುಗಳ ಅಧ್ಯಯನ ಮೂಲಕ ನಿತ್ಯಜೀವನಕ್ಕೆ ಅಗತ್ಯವಾದ ವಿಚಾರಗಳನ್ನು ಸಂಪಾದಿಸಿಕೊಳ್ಳಬಹುದು. ಇದು ಜೀವನದಲ್ಲಿ ಶಿಸ್ತು ಅಳವಡಿಸಿಕೊಳ್ಳುವುದಕ್ಕೆ ಕಾರಣವಾಗುತ್ತದೆ. ಪ್ರಸ್ತುತ ಸಮಾಜದಲ್ಲಿ ವೇದ ಮತ್ತು ಶಾಸ್ತ್ರಗಳ ಅಧ್ಯಯನದ ಕಡೆಗೆ ಜನ ಹೆಚ್ಚು ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಹಿನ್ನೆಲೆಯಲ್ಲಿ ಜನಸಾಮಾನ್ಯರ ಅಪೇಕ್ಷೆಯಂತೆ ಮುಜುಂಗಾವಿನ ದೇವ-ವೈದ್ಯ-ವೇದಗಳ ಸಂಗಮ ಭೂಮಿಯಲ್ಲಿ ನಡೆದ ವಸಂತವೇದ ಶಿಬಿರ ಯಶಸ್ವಿಯಾಗಿದೆ ಎಂದು ಕುಂಬಳೆ ವಲಯ ಅಧ್ಯಕ್ಷ . ಕೃಷ್ಣಮೋಹನ ಭಟ್ ಅಭಿಪ್ರಾಯಪಟ್ಟರು. ಅವರು 17.05.2014 ಶನಿವಾರ ನಮ್ಮ ವಿದ್ಯಾಪೀಠದಲ್ಲಿ ಸುಮಾರು ಒಂದೂವರೆ ತಿಂಗಳು ಕಾಲ ವೇ|ಮೂ ಮಹಾದೇವ ಭಟ್ ಕೋಣಮ್ಮೆ ಇವರ ನೇತೃತ್ವದಲ್ಲಿ ಜರಗಿದ ವಸಂತ ವೇದ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಶ್ರೀ ಭಾರತೀ ವಿದ್ಯಾಪೀಠದ ಕಾರ್ಯದರ್ಶಿ ಎಚ್.ಸತ್ಯಶಂಕರ ಭಟ್ ಹಿಳ್ಳೆಮನೆ ಮುಖ್ಯ ಅತಿಥಿಗಳಾಗಿದ್ದರು. ವೇದ ಶಿಕ್ಷಣ ನೀಡಿದ ವೇ|ಮೂ ವಿಶ್ವೇಶ್ವರ ಭಟ್ ಮಣಿಮುಂಡ ಮತ್ತು ನಾರಾಯಣ.ಜಿ.ಹೆಗಡೆ ಉಪಸ್ಥಿತರಿದ್ದರು. ಶಾಲಾ ಸಮಿತಿಯ ಜೊತೆ ಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ ಸ್ವಾಗತಿಸಿದರು. ವಿದ್ಯಾಪೀಠದ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಭೆಮಾರ್ಗ ವಂದಿಸಿದರು.

No comments:

Post a Comment