Jul 14, 2014

ಗುರು ಪೂರ್ಣಿಮಾ 2014

               
ಗುರು ಸರ್ವಜ್ಞ, ಸರ್ವಜ್ಞ ಪ್ರತಿಯೊಬ್ಬರಿಂದ ಒಂದೊಂದು ನುಡಿ ಕಲಿತು ಸರ್ವಜ್ಞತ್ವಕ್ಕೇರಿದ. ಗುರುಪೂರ್ಣಿಮೆಯ ಸಂದರ್ಭದಲ್ಲಿ ನಾವೆಲ್ಲರೂ ಹಿತನುಡಿಗಳನ್ನು ಕಲಿತು ಆಚರಿಸುವ ಸಂಕಲ್ಪವನ್ನು ಮಾಡಬೇಕಾಗಿದೆಎಂದು ನಮ್ಮ ಶಾಲಾ ಸೇವಾ ಸಮಿತಿಯ ಅಧ್ಯಕ್ಷ ಮದನಗುಳಿ ರಾಮಚಂದ್ರ ಭಟ್ ಅಭಿಪ್ರಾಯಪಟ್ಟರು. ಅವರು ಮೊನ್ನೆ, 12.07.2014 ಶನಿವಾರ ನಮ್ಮ ವಿದ್ಯಾಪೀಠದಲ್ಲಿ ಜರಗಿದ ಗುರುಪೂರ್ಣಿಮಾಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ಕುಂಬಳೆ ವಲಯ ಗುರಿಕಾರ ಕೆ.ಎಸ್.ಶಂಕರ ಭಟ್ ಕಾವೇರಿಕಾನ, ಶಾಲಾ ಸಮಿತಿಯ ಜೊತೆ ಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆ ಮಾರ್ಗ, ಹಿರಿಯ ಶಿಕ್ಷಕ ಕೃಷ್ಣ ಭಟ್ ಉಪಸ್ಥಿತರಿದ್ದರು. ವಿಶಿಷ್ಟ ರೀತಿಯಲ್ಲಿ ನಡೆದ ಕಾರ್ಯಕ್ರಮವನ್ನು ಸುಪ್ರೀತಿ ಎನ್.ಧರ್ಮತ್ತಡ್ಕ ನಿರ್ವಹಿಸಿದರು.

No comments:

Post a Comment