Jul 29, 2014

ಒಪ್ಪಣ್ಣ ನೆರೆಕರೆ ಪ್ರತಿಷ್ಠಾನದಿಂದ ಕಲಿಕೋಪಕರಣಗಳ ಕೊಡುಗೆ


               

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಅನ್ಯರ ಸಹಕಾರ ಹೆಚ್ಚು ಅಪೇಕ್ಷಣೀಯ. ಬಡ ವಿದ್ಯಾರ್ಥಿಗಳಿಗೆ ಕಲಿಕೆಯ ಸಂಪನ್ಮೂಲಗಳ ಕ್ರೋಡೀಕರಣಕ್ಕಾಗಿ ಸ್ವಯಂಸೇವಾ ಸಂಸ್ಥೆಗಳು ಸಹಕಾರಿಗಳಾಗಬೇಕು. ದೇವರ ಭಯವೇ ಜ್ಞಾನದ ಆರಂಭವಾದುದರಿಂದ ಜನತಾ ಜನಾರ್ದನರ ಸೇವೆ ಈ ನಿಟ್ಟಿನಲ್ಲಿ ಅಗತ್ಯ. ಪರಿಣಾಮವಾಗಿ ಸಮಾಜದ ಬೆಳಕಿನಲ್ಲಿ ಬೆಳೆಯುವ ವಿದ್ಯಾರ್ಥಿಗಳು ಹೆಚ್ಚು ಪ್ರಗತಿ ಹೊಂದಬೇಕು ಹಾಗೂ ತನ್ಮೂಲಕ ಸಹಕರಿಸಿದ ಸಂಸ್ಥೆಗಳಿಗೆ ಕೀರ್ತಿ ತರಬೇಕುಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕ ಉಡುಪುಮೂಲೆ ರಘುರಾಮ ಭಟ್ ಅಭಿಪ್ರಾಯಪಟ್ಟರು. ಅವರು 25.07.2014 ಶುಕ್ರವಾರ ನಮ್ಮ ವಿದ್ಯಾಪೀಠದಲ್ಲಿ ಹವ್ಯಕ ಭಾಷೆಯ ಬೆಳವಣಿಗೆಗಾಗಿ ಅಂತರ್ಜಾಲದಲ್ಲಿ ರೂಪುಗೊಂಡಿರುವ ಒಪ್ಪಣ್ಣ ಡಾಟ್ ಕಾಮ್, ಒಪ್ಪಣ್ಣ ನೆರೆಕರೆ ಪ್ರತಿಷ್ಠಾನವು ವಿದ್ಯಾರ್ಥಿಗಳಿಗಾಗಿ ಕೊಡಮಾಡಿದ ಕಲಿಕೋಪಕರಣಗಳ ವಿತರಣೆ ಮತ್ತು ತಿಂಗಳ ಪ್ರತಿಭಾ ಭಾರತೀಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ವಿದ್ಯಾರ್ಥಿ ಆದಿತ್ಯ ಶರವಣ ಹಿಳ್ಳೆಮನೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪಿ.ಕೃಷ್ಣ ಭಟ್ ಕುಂಚಿನಡ್ಕ, ಒಪ್ಪಣ್ಣ ನೆರೆಕರೆ ಪ್ರತಿಷ್ಠಾನದ ಭರತನಾಟ್ಯ ಕಲಾವಿದೆ ಅನುಪಮಾ ರಾಘವೇಂದ್ರ ಉಡುಪುಮೂಲೆ, ಛಾಯಾಗ್ರಾಹಕ ಹರೀಶ್ ಹಳೆಮನೆ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆ ಮಾರ್ಗ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶ್ರೀಜಾ ಗಿರೀಶ್ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ಸಂಯುಕ್ತ.ಎಂ ಸ್ವಾಗತಿಸಿ ವಿಕ್ರಮ್ ವಂದಿಸಿದರು. ರೇಶ್ಮಾ ರಾಮಚಂದ್ರ ಹಾಗೂ ತೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

No comments:

Post a Comment