Jul 8, 2014

ಜೇವರ್ ಜೀ ಭೇಟಿ


               
ಧರ್ಮಚಕ್ರ ಟ್ರಸ್ಟ್ ವ್ಯಾಪ್ತಿಯಲ್ಲಿ ಶ್ರೀರಾಮಚಂದ್ರಾಪುರ ಮಠದ ಅಧೀನದಲ್ಲಿರುವ ವಿದ್ಯಾಸಂಸ್ಥೆಗಳ ಪುನರುದ್ಧಾರಣ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಲಾಗುತ್ತಿದೆ. ಎಲ್ಲ ವಿದ್ಯಾಸಂಸ್ಥೆಗಳನ್ನೂ ಉಪಗ್ರಹಗಳ ಮೂಲಕ ಸಂಪರ್ಕಿಸಿ ವಿದ್ಯಾರ್ಥಿಗಳಿಗೆ ಸತ್ಯದ ಬೆಳಕು ದೊರೆಯುವಂತಾಗಲು ಪ್ರಯತ್ನಿಸಲಾಗುತ್ತಿದೆ.” ಎಂದು ಸಿದ್ಧಾಂತ ಫೌಂಡೇಶನ್ ನಿರ್ದೇಶಕ ಜೇವರ್ ಜೀ ಅಭಿಪ್ರಾಯಪಟ್ಟರು. ಅವರು 05.07.2014 ಶನಿವಾರ ನಮ್ಮ ವಿದ್ಯಾಪೀಠದಲ್ಲಿ ಜರಗಿದಮುಖ್ಯಸ್ಥರೊಂದಿಗೆ ಮಾತುಕತೆಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ  ಮಾತನಾಡುತ್ತಿದ್ದರು.

ಶಾಲಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಭಟ್ ಮದನಗುಳಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಧರ್ಮಚಕ್ರ ಟ್ರಸ್ಟ್ ಅಧೀನದಲ್ಲಿರುವ ವಿದ್ಯಾ ಸಂಸ್ಥೆಗಳ -ಶಿಕ್ಷಣ ವಿಭಾಗದ ಶ್ರೀಹರ್ಷ, ಸಿದ್ಧಾಂತ ಫೌಂಡೇಶನ್ ಶಿಕ್ಷಣ ವಿಭಾಗದ ಕಾರ್ಯದರ್ಶಿ ಶ್ರೀಮತಿ ರೆಮಾ, ಭಾಗವತ ಪ್ರವಚನಕಾರ ನಾರಾಯಣನ್ ಪೋತ್ತಿ, ಶಾಲಾ ಸಮಿತಿಯ ಉಪಾಧ್ಯಕ್ಷ ಶಂಕರಪ್ರಸಾದ್ ನಾಯ್ಕಾಪು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಚಿತ್ರಾ ಪೆರಡಾನ ಸ್ವಾಗತಿಸಿ ಶಿವಕುಮಾರಿ ವಂದಿಸಿದರು. ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆ ಮಾರ್ಗ ಕಾರ್ಯಕ್ರಮ ನಿರೂಪಿಸಿದರು.

No comments:

Post a Comment