Aug 15, 2014

‘ಸತ್-ಲೈಟ್’ ಉದ್ಘಾಟನೆ - ಸ್ವಾತಂತ್ರ್ಯೋತ್ಸವ



ಉತ್ತಮವಾದುದನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಿರಿಯರ ಬಲಿದಾನ ಮತ್ತು ಜೀವನ ಸಾರ್ಥಕತೆಯ ಆದರ್ಶವನ್ನು ನಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಬೇಕು. ಪ್ರಧಾನಮಂತ್ರಿಯವರ ಆದರ್ಶದಂತೆ ಸ್ವಚ್ಚವಾದ ಭಾರತ ನಿರ್ಮಾಣಕ್ಕಾಗಿ ನಾವೆಲ್ಲ ಪ್ರಯತ್ನಿಸಬೇಕು” ಎಂದು ಕುಂಬಳೆ ಗ್ರಾಮ ಪಂಚಾಯತು ಮಾಜಿ ಉಪಾಧ್ಯಕ್ಷ ಕೇಶವ ಪ್ರಸಾದ್ ನಾಣಿತ್ಲು ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ವಿದ್ಯಾಪೀಠದಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಮಕ್ಕಳ ಕಲಿಕೆಗಾಗಿ ‘ಸತ್-ಲೈಟ್’ ವ್ಯವಸ್ಥೆಯ ಉದ್ಘಾಟನೆಯೂ ಜರಗಿತು.

ಶಾಲಾ ಸೇವಾ ಸಮಿತಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಎಂ.ಚಂದ್ರಶೇಖರ ಭಟ್ ಮಡ್ವ, ಮುಳ್ಳೇರಿಯಾ ಮಂಡಲ ವಿದ್ಯಾ ಪ್ರಧಾನ ಬಾಲಕೃಷ್ಣ ಶರ್ಮ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆ ಮಾರ್ಗ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಅಂಜನಾ ಸ್ವಾಗತಿಸಿ ಸ್ಕಂದ ಮುರಳಿ ವಂದಿಸಿದರು. ಪ್ರಶಾಂತ್.ಎಂ ಕಾರ್ಯಕ್ರಮ ನಿರೂಪಿಸಿದರು.

No comments:

Post a Comment