Oct 29, 2014

“ಬಾಳೆಕಾಯಿಯಿಂದ ಮೌಲ್ಯವರ್ಧಿತ ಉತ್ಪನ್ನ: ಡಾ|ಸರಿತಾ ಹೆಗ್ಡೆ''

                ಬಾಳೆಕಾಯಿಯನ್ನು ಬೇಯಿಸಿ ತಯಾರಿಸುವ ಸೇಮಗೆಯು ಮೌಲ್ಯವರ್ಧಿತ ಉತ್ಪನ್ನವಾಗಿದ್ದು ಬಹುಕಾಲ ಬಾಳ್ವಿಕೆ ಬರುತ್ತದೆ. ಹಣ್ಣಾದರೆ ಬಹುಬೇಗನೆ ಕೊಳೆತು ಹೋಗುವ ತಳಿಯ ಬಾಳೆಕಾಯಿಗಳನ್ನು ರೀತಿ ಸಂರಕ್ಷಿಸಿ ವಿವಿಧ ರೂಪಗಳಲ್ಲಿ ಬಳಸಬಹುದು. ಜನಸಾಮಾನ್ಯರಿಗೆ ಬಗ್ಗೆ ತಿಳುವಳಿಕೆಯನ್ನು ನೀಡಲು ಕೃಷಿ ವಿಜ್ಞಾನ ಕೇಂದ್ರವು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆಎಂದು ಕಾಸರಗೋಡು ಕೃಷಿ ವಿಜ್ಞಾನ ಕೇಂದ್ರದ ಡಾ|ಸರಿತಾ ಹೆಗ್ಡೆ ಅಭಿಪ್ರಾಯಪಟ್ಟರು. ಅವರು 13.10.2014 ಸೋಮವಾರ ನಮ್ಮ ವಿದ್ಯಾಪೀಠದಲ್ಲಿ ಜರಗಿದ ಮೌಲ್ಯಯುತ ಬಾಳೆಕಾಯಿಯ ಕುರಿತ ಪರಿಚಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುತ್ತಿದ್ದರು.

ಶಾಲಾ ಸಮಿತಿಯ ಜೊತೆ ಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಭಟ್, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆ ಮಾರ್ಗ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ವಿಕ್ರಂ ಸ್ವಾಗತಿಸಿ ನಿಶಿತಾ.ಎನ್ ವಂದಿಸಿದರು. ಶ್ರೀಜಾ ಗಿರೀಶ್ ಕಾರ್ಯಕ್ರಮ ನಿರೂಪಿಸಿದರು.

Oct 14, 2014

’ಪ್ರತಿಭಾ ಭಾರತೀ - ಅಕ್ಟೋಬರ್ 2014’



ವೇದಿಕೆಯ ಮೇಲೆ ನಿಂತು ಮಾತನಾಡುವುದು ವಿದ್ಯಾರ್ಥಿಗಳಿಗೆ ಆತ್ಮ ಸ್ಥೈರ್ಯವನ್ನು ತಂದುಕೊಡುತ್ತದೆ, ಹೆಚ್ಚಿದ ಆತ್ಮವಿಶ್ವಾಸ ಹಲವು ಸಾಧನೆಗಳಿಗೆ ನಾಂದಿಯಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯ ಅನಾವರಣಕ್ಕೆ ವೇದಿಕೆಯಾಗುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಭವಿಷ್ಯವನ್ನು ಚೆನ್ನಾಗಿ ರೂಪಿಸಿಕೊಳ್ಳಬೇಕುಎಂದು ಕೃಷಿಕ ಪಂಜೆ ದಯಾನಂದ ಭಟ್ ಅಭಿಪ್ರಾಯಪಟ್ಟರು. ಅವರು 09.10.2014 ಗುರುವಾರ ನಮ್ಮ ವಿದ್ಯಾಪೀಠದಲ್ಲಿ ನಡೆದ ತಿಂಗಳಪ್ರತಿಭಾ ಭಾರತೀಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ವಿದ್ಯಾರ್ಥಿ ಪುನೀತ್ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಮಿತಿಯ ಜತೆಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆ ಮಾರ್ಗ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ದೀಕ್ಷಾ.ಎಸ್ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ನವ್ಯಶ್ರೀ ಸ್ವಾಗತಿಸಿ ಜಯಶ್ರೀ ವಂದಿಸಿದರು. ಭಾವನಾ ಮತ್ತು ಶಿಲ್ಪ ಕಾರ್ಯಕ್ರಮ ನಿರೂಪಿಸಿದರು.

ವಿದ್ಯಾ ದಶಮಿ



04.10.2014 ಶನಿವಾರ ನಮ್ಮ ವಿದ್ಯಾಪೀಠದಲ್ಲಿ ವೇದಮೂರ್ತಿ ಕೋಣಮ್ಮೆ ಮಹಾದೇವ ಭಟ್ಟರು ಶಾರದಾಪೂಜೆಯನ್ನು ನೆರವೇರಿಸಿ ಪುಟಾಣಿಗಳಿಗೆ ಅಕ್ಷರಾಭ್ಯಾಸ ಮಾಡಿಸಿದರು.

ಗಣೇಶ ಚತುರ್ಥಿ

ಈ ಬಾರಿ ಗಣೇಶ ಚತುರ್ಥಿ ಕಾರ್ಯಕ್ರಮದ ಆಚರಣೆ ಅಗೋಸ್ತು ತಿಂಗಳ 29ನೇ ತಾರೀಕಿನಂದು ನಮ್ಮ ವಿದ್ಯಾಪೀಠದಲ್ಲಿ ಜರಗಿತು. ವೇದಮೂರ್ತಿ ಬ್ರಹ್ಮಶ್ರೀ ಕೋಣಮ್ಮೆ ಮಹಾದೇವ ಭಟ್ಟರು ಪೌರೋಹಿತ್ಯವನ್ನು ನಡೆಸಿದರು, ಶಾಲಾ ಸಮಿತಿಯ ಅಧ್ಯಕ್ಷ ಮದನಗುಳಿ ರಾಮಚಂದ್ರ ಭಟ್ ಉಪಸ್ಥಿತರಿದ್ದರು.