Nov 20, 2014

‘ಪ್ರತಿಭಾ ಭಾರತೀ - ನವೆಂಬರ್’



“ಪ್ರತಿಭಾ ಭಾರತೀ ಉತ್ತಮವಾಗಿ ಮೂಡಿ ಬರುತ್ತಿದೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸುವ ತುಡಿತವನ್ನು ಹೊಂದಿರಬೇಕು. ಜನ್ಮಜಾತವಾದ ಪ್ರತಿಭೆಯನ್ನು ಇಂತಹ ವೇದಿಕೆಗಳಲ್ಲಿ ಬೆಳಗಿಸಬೇಕು. ಉತ್ತಮ ಪ್ರತಿಭೆಗಳನ್ನು ಬೆಳೆಸಿಕೊಂಡಾಗ ಕೆಟ್ಟ ಹವ್ಯಾಸಗಳು ದೂರವಾಗುತ್ತವೆ. ಆದ್ದರಿಂದ ಎಳವೆಯಲ್ಲಿಯೇ ಪ್ರತಿಭೆ ಮತ್ತು ಮಾನವೀಯ ಮೌಲ್ಯಗಳನ್ನು ವಿಕಾಸಗೊಳಿಸಿಕೊಳ್ಳಬೇಕು” ಎಂದು ನಿವೃತ್ತ ಮುಖ್ಯೋಪಾಧ್ಯಾಯ ಎಚ್. ರಾಮ ಭಟ್ ಕಾರಿಂಜ ಹಳೆಮನೆ ಅಭಿಪ್ರಾಯಪಟ್ಟರು. ಅವರು ನಿನ್ನೆ 19.11.2014 ಬುಧವಾರ ನಮ್ಮ ವಿದ್ಯಾಪೀಠದಲ್ಲಿ ನಡೆದ ತಿಂಗಳ ’ಪ್ರತಿಭಾ ಭಾರತೀ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ವಿದ್ಯಾರ್ಥಿ ಲಕ್ಷ್ಮಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಮಿತಿಯ ಜತೆಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆ ಮಾರ್ಗ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶ್ರೀಜಾ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ಅನನ್ಯ ಸ್ವಾಗತಿಸಿ ರಜಿತ್ ವಂದಿಸಿದರು. ಕೌಶಿಕ್ ಸಿ.ಆರ್ ಮತ್ತು ಆದಿತ್ಯ ಕಾರ್ಯಕ್ರಮ ನಿರೂಪಿಸಿದರು.

No comments:

Post a Comment