Jan 8, 2015

ಜನವರಿ 10 ರಂದು ವರ್ಧಂತ್ಯುತ್ಸವ, ಬನ್ನಿ...


ನಮ್ಮ ವಿದ್ಯಾಪೀಠದ ವರ್ಧಂತ್ಯುತ್ಸವವು 10.01.2015 ಶನಿವಾರ ಶಾಲಾ ಪರಿಸರದಲ್ಲಿ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಕುಂಬಳೆ ಪುರುಷೋತ್ತಮ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಪರಾಹ್ನ 3.00 ರಿಂದ ಜರಗುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಭಟ್ ಮದನಗುಳಿ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಕುಂಬಳೆ ಗ್ರಾಮ ಪಂಚಾಯತು ಸದಸ್ಯೆ ಅಶ್ವಿನಿ ನಾಣಿತ್ತಿಲು, ಕಾಸರಗೋಡು ನಗರಸಭೆಯ ಮಾಜಿ ಅಧ್ಯಕ್ಷ ಎಸ್.ಜೆ.ಪ್ರಸಾದ್, ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕೈಲಾಸಮೂರ್ತಿ.ಕೆ ಅಭ್ಯಾಗತರಾಗಿ ಆಗಮಿಸಲಿದ್ದಾರೆ. ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ತಾವೂ ಬನ್ನಿ, ತಮ್ಮವರನ್ನೂ ಕರೆತನ್ನಿ...

No comments:

Post a Comment