“ಬೆಳವಣಿಗೆಯ ಆರಂಭದ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ತಮ್ಮ ಕೆಲಸಗಳನ್ನು ತಾವೇ ಮಾಡುವಂತೆ ಪ್ರೇರೇಪಿಸಬೇಕು. ತಮ್ಮ ನಿತ್ಯ ನೈಮಿತ್ತಿಕ ಕಾರ್ಯಗಳನ್ನು ತಾವೇ ಶ್ರದ್ಧೆ ಮತ್ತು ಪ್ರೀತಿಯಿಂದ ಮಾಡಿಸುವುದು ಹೆತ್ತವರ ಕರ್ತವ್ಯ. ವಿದ್ಯಾರ್ಥಿಗಳು ಏನು ಮಾಡುತ್ತಿದ್ದಾರೆ ಮತ್ತು ಏನು ಕಲಿಯುತ್ತಿದ್ದಾರೆ ಎಂಬ ಬಗ್ಗೆ ಪೂರ್ಣ ಮಹಿತಿ ಹೆತ್ತವರಿಗೆ ಇರಬೇಕು. ವಿದ್ಯಾರ್ಥಿಗಳಲ್ಲಿ ಜವಾಬ್ದಾರಿಯ ಅರಿವು ಮೂಡಿಸುವುದು ಹೆತ್ತವರ ಹೊಣೆಗಾರಿಕೆ” ಎಂದು ಖ್ಯಾತ ವೈದ್ಯೆ ಡಾ| ವಾರುಣಿ ಶ್ರೀರಾಮ್ ಅಭಿಪ್ರಾಯಪಟ್ಟರು. ಅವರು 26.02.2015 ಗುರುವಾರ ನಮ್ಮ ವಿದ್ಯಾಪೀಠದಲ್ಲಿ ಪೋಷಕರಿಗಾಗಿ ನಡೆದ ‘ವೈದ್ಯರೊಂದಿಗೆ ಮಾತುಕತೆ’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಶಿಕ್ಷಕಿಯರಾದ ಕುಸುಮಾ ಸ್ವಾಗತಿಸಿ ಶಿಲ್ಪಾ.ಎಸ್ ವಂದಿಸಿದರು. ಶಿವಕುಮಾರಿ.ಪಿ ಕಾರ್ಯಕ್ರಮ ನಿರೂಪಿಸಿದರು.
No comments:
Post a Comment