Jan 30, 2016

ಫೆಬ್ರವರಿ 6 ರಂದು ‘ವರ್ಧಂತ್ಯುತ್ಸವ’

ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ನಮ್ಮ ವಿದ್ಯಾಪೀಠದ ವರ್ಧಂತ್ಯುತ್ಸವವು 06.02.2016ನೇ ಶನಿವಾರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬೆಳಗ್ಗೆ 9.30ಕ್ಕೆ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ ದ್ವೀಪ ಪ್ರಜ್ವಲನೆ ನಡೆಸುವರು.
        ಅಪರಾಹ್ನ 3.00 ಗಂಟೆಯಿಂದ ಜರಗುವ ಸಮಾರೋಪ ಸಮಾರಂಭದಲ್ಲಿ ಶ್ರೀರಾಮಚಂದ್ರಾಪುರ ಮಠದ ವಿದ್ಯಾ ವಿಭಾಗದ ಕಾರ್ಯದರ್ಶಿ ಡಾ|ಶಾರದಾ ಜಯಗೋವಿಂದ, ಕಾಸರಗೋಡು ಬ್ಲಾಕ್ ಪಂಚಾಯತ್ ಸದಸ್ಯ ಸತ್ಯಶಂಕರ ಭಟ್ ಹಿಳ್ಳೆಮನೆ, ಕುಂಬಳೆ ಗ್ರಾಮ ಪಂಚಾಯತು ಸದಸ್ಯ ಹರೀಶ ಗಟ್ಟಿ ಕೋಟೆಕ್ಕಾರ್, ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಕೆ.ಕೈಲಾಸಮೂರ್ತಿ, ಹೊಸದಿಗಂತ ಪತ್ರಿಕೆಯ ಮಂಗಳೂರು ಆವೃತ್ತಿಯ ಸ್ಥಾನೀಯ ಸಂಪಾದಕ ಪ್ರಕಾಶ್ ಇಳಂತಿಲ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶ್ರೀಮತಿ ಸಂಧ್ಯಾ.ವಿ.ಶೆಟ್ಟಿ ಪ್ರಮುಖ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.

Jan 21, 2016

ಪ್ರತಿಭಾ ಭಾರತೀ - ಜನವರಿ 2016



      “ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಪ್ರತಿಭಾ ಭಾರತಿಯು ಉತ್ತಮ ಕಾರ್ಯಕ್ರಮವಾಗಿದೆ. ಮಕ್ಕಳಲ್ಲಿ ಸಚ್ಚಾರಿತ್ರ್ಯದ ನಿರ್ಮಾಣವು ಕಾಲದ ಅಗತ್ಯವಾಗಿದೆ. ನಿಟ್ಟಿನಲ್ಲಿ ಶಿಕ್ಷಕರ ಪರಿಶ್ರಮ ಅತ್ಯಗತ್ಯ. ಹಿರಿಯರ ಕಷ್ಟಗಳನ್ನು ಅರಿತು ಅವರಿಗೆ ಸಹಾಯ ನೀಡಲು ಮಕ್ಕಳು ಪ್ರಯತ್ನಿಸಬೇಕು.” ಎಂದು ಕುಂಬಳೆ ಗ್ರಾಮ ಪಂಚಾಯತು ಸದಸ್ಯಮುರಳೀಧರ ಯಾದವ್ ನಾಯ್ಕಾಪು ಅಭಿಪ್ರಾಯಪಟ್ಟರು. ಅವರು 01.01.2016 ಶುಕ್ರವಾರ ನಮ್ಮ ವಿದ್ಯಾಪೀಠದಲ್ಲಿ ನಡೆದ ಐದನೆಯ ಪ್ರತಿಭಾ ಭಾರತೀ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ವಿದ್ಯಾರ್ಥಿನಿ ದೀಕ್ಷಾ.ಎಸ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರುಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯಶಾಲಾ ಸಮಿತಿಯ ಜೊತೆಕಾರ್ಯದರ್ಶಿ ಶ್ಯಾಮರಾಜ್ದೊಡ್ಡಮಾಣಿಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಬೆ ಮಾರ್ಗಮುಖ್ಯಶಿಕ್ಷಕಿ ಶ್ರೀಮತಿ ಚಿತ್ರಾಸರಸ್ವತಿ ಪೆರಡಾನಸಂಸ್ಕೃತ ಶಿಕ್ಷಕ ಡಾ| ಎಸ್.ಸದಾಶಿವ ಭಟ್ ಉಪಸ್ಥಿತರಿದ್ದರುಕುಂಬಳೆ ಗ್ರಾಮ ಪಂಚಾಯತು ಸದಸ್ಯರಾಗಿ ಆಯ್ಕೆಯಾದ ಮುರಳೀಧರ ಯಾದವ್ ಅವರನ್ನು ಗೌರವಿಸಲಾಯಿತುವಿದ್ಯಾರ್ಥಿಗಳಾದ ಲಿಖಿತ್ ಕುಮಾರ್ ಸ್ವಾಗತಿಸಿ ಲಕ್ಷ್ಮೀಶವಂದಿಸಿದರುಸುಹಾಸ್ ಮತ್ತು ಶ್ರೀಶಶ್ರೀ ಕಾರ್ಯಕ್ರಮ ನಿರೂಪಿಸಿದರು.