“ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಪ್ರತಿಭಾ ಭಾರತಿಯು ಉತ್ತಮ ಕಾರ್ಯಕ್ರಮವಾಗಿದೆ. ಮಕ್ಕಳಲ್ಲಿ ಸಚ್ಚಾರಿತ್ರ್ಯದ ನಿರ್ಮಾಣವು ಕಾಲದ ಅಗತ್ಯವಾಗಿದೆ. ಈನಿಟ್ಟಿನಲ್ಲಿ ಶಿಕ್ಷಕರ ಪರಿಶ್ರಮ ಅತ್ಯಗತ್ಯ. ಹಿರಿಯರ ಕಷ್ಟಗಳನ್ನು ಅರಿತು ಅವರಿಗೆ ಸಹಾಯ ನೀಡಲು ಮಕ್ಕಳು ಪ್ರಯತ್ನಿಸಬೇಕು.” ಎಂದು ಕುಂಬಳೆ ಗ್ರಾಮ ಪಂಚಾಯತು ಸದಸ್ಯಮುರಳೀಧರ ಯಾದವ್ ನಾಯ್ಕಾಪು ಅಭಿಪ್ರಾಯಪಟ್ಟರು. ಅವರು 01.01.2016 ಶುಕ್ರವಾರ ನಮ್ಮ ವಿದ್ಯಾಪೀಠದಲ್ಲಿ ನಡೆದ ಐದನೆಯ ’ಪ್ರತಿಭಾ ಭಾರತೀ’ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ವಿದ್ಯಾರ್ಥಿನಿ ದೀಕ್ಷಾ.ಎಸ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ, ಶಾಲಾ ಸಮಿತಿಯ ಜೊತೆಕಾರ್ಯದರ್ಶಿ ಶ್ಯಾಮರಾಜ್ದೊಡ್ಡಮಾಣಿ, ಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಬೆ ಮಾರ್ಗ, ಮುಖ್ಯಶಿಕ್ಷಕಿ ಶ್ರೀಮತಿ ಚಿತ್ರಾಸರಸ್ವತಿ ಪೆರಡಾನ, ಸಂಸ್ಕೃತ ಶಿಕ್ಷಕ ಡಾ| ಎಸ್.ಸದಾಶಿವ ಭಟ್ ಉಪಸ್ಥಿತರಿದ್ದರು. ಕುಂಬಳೆ ಗ್ರಾಮ ಪಂಚಾಯತು ಸದಸ್ಯರಾಗಿ ಆಯ್ಕೆಯಾದ ಮುರಳೀಧರ ಯಾದವ್ ಅವರನ್ನು ಗೌರವಿಸಲಾಯಿತು. ವಿದ್ಯಾರ್ಥಿಗಳಾದ ಲಿಖಿತ್ ಕುಮಾರ್ ಸ್ವಾಗತಿಸಿ ಲಕ್ಷ್ಮೀಶವಂದಿಸಿದರು. ಸುಹಾಸ್ ಮತ್ತು ಶ್ರೀಶಶ್ರೀ ಕಾರ್ಯಕ್ರಮ ನಿರೂಪಿಸಿದರು.
No comments:
Post a Comment