Feb 10, 2016

ವರ್ಧಂತ್ಯುತ್ಸವ ಸಂಪನ್ನ





ಮಕ್ಕಳೆಂದರೆ ಪ್ರಕೃತಿಯ ಕೊಡುಗೆಅವರಲ್ಲಿ ಪುಟಿದೇಳುವ ಉತ್ಸಾಹ ಎಲ್ಲರಿಗೂ ಸ್ಫೂರ್ತಿಯನ್ನು ನೀಡುತ್ತದೆಶ್ರೀರಾಮಚಂದ್ರಾಪುರ ಮಠದ ಶಾಲೆಗಳಲ್ಲಿ ಅಂತಹ ಉತ್ಸಾಹವನ್ನುಬೆಳೆಸುವ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆವೇದ ಗಣಿತಕ್ಕೂ  ವಿದ್ಯಾಸಂಸ್ಥೆಗಳಲ್ಲಿ ತರಬೇತಿ ನೀಡಲಾಗುತ್ತಿದೆಮಕ್ಕಳ ಕನಸುಗಳಿಗೆ  ವಿದ್ಯಾಸಂಸ್ಥೆಗಳಲ್ಲಿ ರೂಪಕಲ್ಪನೆಯನ್ನು ನೀಡಲು ಪ್ರಯತ್ನಿಸಲಾಗುತ್ತಿದೆಮಕ್ಕಳು ಬಾಣದಂತೆಹೂಡುವವನಿಗೆ ಗುರಿಯನ್ನು ತಲಪಿಸುವ ಜವಾಬ್ದಾರಿಯೂ ಇದೆ" ಎಂದು ಶ್ರೀರಾಮಚಂದ್ರಾಪುರ ಮಠದ ವಿದ್ಯಾವಿಭಾಗದ ಕಾರ್ಯದರ್ಶಿ ಡಾ|ಶಾರದಾ ಜಯಗೋವಿಂದ ಅಭಿಪ್ರಾಯಪಟ್ಟರು.  ಅವರು 06.02.2016 ಶನಿವಾರ ನಮ್ಮ ವಿದ್ಯಾಪೀಠದಲ್ಲಿ ನಡೆದ ವರ್ಧಂತ್ಯುತ್ಸವದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಕಾಸರಗೋಡು ಬ್ಲಾಕ್ ಪಂಚಾಯತ್ ಸದಸ್ಯ ಸತ್ಯಶಂಕರ ಭಟ್ ಹಿಳ್ಳೆಮನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರುಅಭ್ಯಾಗತರಾಗಿ ಕುಂಬಳೆ ಗ್ರಾಮ   ಪಂಚಾಯತು ಸದಸ್ಯ ಹರೀಶ ಗಟ್ಟಿ ಕೋಟೆಕ್ಕಾರ್ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಕೆ.ಕೈಲಾಸಮೂರ್ತಿಹೊಸದಿಗಂತ ಪತ್ರಿಕೆಯ ಮಂಗಳೂರು   ಆವೃತ್ತಿಯ ಸ್ಥಾನೀಯ ಸಂಪಾದಕ ಪ್ರಕಾಶ್ ಇಳಂತಿಲಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ   ಶ್ರೀಮತಿ ಸಂಧ್ಯಾ.ವಿ.ಶೆಟ್ಟಿರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯಶಾಲಾ ಸಮಿತಿಯ ಕೆ.ವೆಂಕಟ್ರಮಣ ಭಟ್ ಸೂರಂಬೈಲು   ಭಾಗವಹಿಸಿದರುಶಾಲಾ ಸಮಿತಿಯ ಜತೆಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ ಪ್ರಾಸ್ತಾವಿಕ ಮಾತುಗಳನ್ನಾಡಿದರುಅಧ್ಯಯನ ವರ್ಷದ   ವರದಿಯನ್ನು ಪ್ರಮುಖ ಶಿಕ್ಷಕಿ ಚಿತ್ರಾ ಸರಸ್ವತಿ ಪೆರಡಾನ ವಾಚಿಸಿದರು.

ಶ್ರೀ ಭಾರತೀ ವಿದ್ಯಾಪೀಠದ ವಿದ್ಯಾರ್ಥಿಗಳ ‘ಬೆಳಕು’ ಮತ್ತು ‘ಜ್ಞಾನದೀಪ್ತಿ’ ಹಸ್ತಪ್ರತಿಗಳನ್ನು ಬಿಡುಗಡೆಗೊಳಿಸಲಾಯಿತುಶಾಲಾ ವಿದ್ಯಾರ್ಥಿಗಳಾದ   ಜಯಶ್ರೀ.ಎಂ.ಸಿ ಸ್ವಾಗತಿಸಿ,ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಭೆ-ಮಾರ್ಗ ವಂದಿಸಿದರುವಿದ್ಯಾರ್ಥಿನಿ ಅನನ್ಯ ಕಾರ್ಯಕ್ರಮ ನಿರೂಪಿಸಿದರು.

ದೀಪ ಪ್ರಜ್ವಲನೆಯೊಂದಿಗೆ ಆರಂಭವಾದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಉದ್ಯಮಿಗಳಾದ ಹಸ್ಮುಖ್ ಪಟೇಲ್ ಮತ್ತು ಪ್ರಶಾಂತ ಪೈ   ನೆರವೇರಿಸಿದರುನಂತರ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ಜರಗಿತು.

No comments:

Post a Comment