
ಕುಂಬಳೆಯ ದಂತವೈದ್ಯೆ ಡಾ|ಸುಭಾಷಿಣಿ ವಿದ್ಯಾರ್ಥಿಗಳಿಗೆ ದಂತ ಸ್ವಚ್ಚತೆಯ ಅಗತ್ಯ ಮತ್ತು ಶುಶ್ರೂಷೆಯ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿನಿ ಶ್ರಾವ್ಯಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ, ಶಾಲಾ ಸಮಿತಿಯ ಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಬೆ ಮಾರ್ಗ, ಮುಖ್ಯಶಿಕ್ಷಕಿ ಶ್ರೀಮತಿ ಚಿತ್ರಾಸರಸ್ವತಿ ಪೆರಡಾನ, ಸಂಸ್ಕೃತ ಶಿಕ್ಷಕ ಡಾ|ಎಸ್.ಸದಾಶಿವ ಭಟ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸ್ಕಂದ ಮುರಳಿ ಸ್ವಾಗತಿಸಿ ಆದಿತ್ಯ ವಂದಿಸಿದರು. ಜಯಶ್ರೀ ಮತ್ತು ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು.
No comments:
Post a Comment